ಪ. ಗೋ. ಪ್ರಶಸ್ತಿಗೆ ಅರ್ಜಿ ಆಹ್ವಾನ

Update: 2022-01-20 17:36 GMT

ಮಂಗಳೂರು, ಜ.20: ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ವತಿಯಿಂದ ಗ್ರಾಮೀಣ ಯುವ ಪತ್ರಕರ್ತರನ್ನು ಪ್ರೋತ್ಸಾಹಿಸುವ ನಿಟ್ಟಿನಲ್ಲಿ ನೀಡಲಾಗುತ್ತಿರುವ ಪ್ರತಿಷ್ಠಿತ ಪ.ಗೋ.(ಪದ್ಯಾಣ ಗೋಪಾಲಕೃಷ್ಣ) ಪ್ರಶಸ್ತಿಗಾಗಿ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

ದ.ಕ., ಉಡುಪಿ, ಉತ್ತರ ಕನ್ನಡ, ಕೊಡಗು, ಚಿಕ್ಕಮಗಳೂರು, ಕಾಸರಗೋಡು ಜಿಲ್ಲೆಯ ಕಾರ್ಯನಿರತ ಪತ್ರಕರ್ತರು 2021ರ ಜನವರಿ 1ರಿಂದ ಡಿಸೆಂಬರ್ 31ರವರೆಗೆ ಕನ್ನಡ ಪತ್ರಿಕೆಗಳಲ್ಲಿ ಪ್ರಕಟಗೊಂಡಿರುವ ವರದಿಯೊಂದಿಗೆ ಪ್ರಶಸ್ತಿಗೆ ಜನವರಿ 31ರೊಳಗೆ ಅರ್ಜಿ ಸಲ್ಲಿಸಬಹುದಾಗಿದೆ. ಅರ್ಜಿ ಸಲ್ಲಿಸುವವರ ವಯಸ್ಸು 45 ಮೀರಿರಬಾರದು. ಗ್ರಾಮೀಣ, ಅಭಿವೃದ್ಧಿಪರ ಮತ್ತು ಮಾನವೀಯ ವರದಿಗಳನ್ನು ಮಾತ್ರ ಪರಿಗಣಿಸಲಾಗುವುದು. ಪ್ರಶಸ್ತಿ 10,001 ರೂ. ನಗದು, ಪ್ರಶಸ್ತಿ ಫಲಕ ಹಾಗೂ ಸ್ಮರಣಿಕೆ ಒಳಗೊಂಡಿರುತ್ತದೆ. ಒಬ್ಬರು ಎರಡು ವರದಿಗಳನ್ನು ನಾಲ್ಕು ಪ್ರತಿಯೊಂದಿಗೆ (ಒಂದು ಮೂಲಪ್ರತಿ ಕಡ್ಡಾಯ) ಮಾತ್ರ ಕಳುಹಿಸಬಹುದಾಗಿದೆ.

ವರದಿಯಲ್ಲಿ ವರದಿಗಾರರ ಬೈಲೈನ್ ಪ್ರಕಟಗೊಂಡಿರಬೇಕು. ಈ ಹಿಂದೆ ಪ್ರಶಸ್ತಿ ಪಡೆದವರಿಗೆ ಮತ್ತೊಮ್ಮೆ ಅರ್ಜಿ ಸಲ್ಲಿಸಲು ಅವಕಾಶವಿಲ್ಲ. ಅರ್ಜಿಯೊಂದಿಗೆ ಭಾವಚಿತ್ರವಿರುವ ಸ್ವವಿವರವನ್ನು ಸಲ್ಲಿಸಬೇಕು. ಅರ್ಜಿಯನ್ನು ಪ್ರಧಾನ ಕಾರ್ಯದರ್ಶಿ, ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ (ರಿ.), ಪತ್ರಿಕಾ ಭವನ, ಉರ್ವ ಮಾರ್ಕೆಟ್ ರಸ್ತೆ, ಮಂಗಳೂರು - 575006. (ದೂ: 0824-2450111.) ಈ ವಿಳಾಸಕ್ಕೆ ಕಳುಹಿಸಬೇಕು ಎಂದು ದ.ಕ. ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘದ ಪ್ರಧಾನ ಕಾರ್ಯದರ್ಶಿ ಇಬ್ರಾಹಿಂ ಅಡ್ಕಸ್ಥಳ ಪ್ರಕಟನೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News