ದ.ಕ. ಜಿಲ್ಲಾಡಳಿತದಿಂದ ಅಂಬಿಗರ ಚೌಡಯ್ಯ ಜಯಂತಿ ಆಚರಣೆ
Update: 2022-01-21 14:55 GMT
ಮಂಗಳೂರು, ಜ.21: ಕೋವಿಡ್ ಸೋಂಕಿನ ಹಿನ್ನೆಲೆಯಲ್ಲಿ ದ.ಕ.ಜಿಲ್ಲಾಡಳಿತ, ದ.ಕ.ಜಿಪಂ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ದ.ಕ. ಮತ್ತು ಉಡುಪಿ ಮೊಗವೀರ ವ್ಯವಸ್ಥಾಪಕ ಮಂಡಳಿ ಹಾಗೂ ಮುಲ್ಕಿ ಶ್ರೀ ನಿಜಶರಣ ಅಂಬಿಗರಚೌಡಯ್ಯ ಸೇವಾ ಸಂಘದ ಸಂಯುಕ್ತಾಶ್ರಯದಲ್ಲಿ ಜಿಲ್ಲಾಧಿಕಾರಿಯ ಕಚೇರಿಯಲ್ಲಿ ಶುಕ್ರವಾರ ಅಂಬಿಗರ ಚೌಡಯ್ಯ ಜಯಂತಿಯನ್ನು ಸರಳವಾಗಿ ಆಚರಿಸಲಾಯಿತು.
ಪ್ರೊಬೆಷನರಿ ಅಧಿಕಾರಿ ಮುಹಮ್ಮದ್ ಆಲಿ ಅಕ್ರಂಪಾಷಾ, ಜಿಲ್ಲಾ ನಗರಾಭಿವೃದ್ದಿ ಕೋಶದ ಯೋಜನಾ ನಿರ್ದೇಶಕಿ ಗಾಯತ್ರಿ ನಾಯಕ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕ ರಾಜೇಶ್ ಜಿ, ದ.ಕ.ಮತ್ತು ಉಡುಪಿ ಮೊಗವೀರ ವ್ಯವಸ್ಥಾಪಕ ಸಂಘದ ಅಧ್ಯಕ್ಷ ಭರತ್ ಎರ್ಮಾಳ್, ಯತೀಶ್ ಬೈಕಂಪಾಡಿ, ಮುಲ್ಕಿ ಶ್ರೀ ನಿಜಶರಣ ಅಂಬಿಗರ ಚೌಡಯ್ಯ ಸೇವಾ ಸಂಘದ ಅಧ್ಯಕ್ಷ ಈರಗಂಟಿ ದೇಸುಣಗಿ ಮತ್ತಿತರರು ಉಪಸ್ಥಿತರಿದ್ದರು.