​ಮೈಸೂರು: ಹುಲಿ ದಾಳಿಗೆ ವ್ಯಕ್ತಿ ಬಲಿ

Update: 2022-01-22 10:49 GMT
ಸಾಂದರ್ಭಿಕ ಚಿತ್ರ

ಮೈಸೂರು: ಹುಲಿ ದಾಳಿಗೆ ವ್ಯಕ್ತಿಯೊಬ್ಬ ಮೃತಪಟ್ಟಿರುವ ಘಟನೆ ಮೈಸೂರು ಜಿಲ್ಲೆ ಎಚ್.ಡಿ.ಕೋಟೆ ತಾಲ್ಲೂಕಿನಲ್ಲಿ ನಡೆದಿದೆ.

ಎಚ್.ಡಿ.ಕೋಟೆ ತಾಲ್ಲೂಕಿನ ಹಿರಳ್ಳಿ ಕಾಲನಿಯ ನಿವಾಸಿ ಮರೀಗೌಡ (70) ಅವರು ಎಂದಿನಂತೆ ತಮ್ಮ ಹಸುಗಳನ್ನು ಕಾಡಿಗೆ ಮೇಯಿಸಲು ಕರೆದುಕೊಂಡು ಹೋಗಿದ್ದು, ಈ ವೇಳೆ ಹುಲಿಯೊಂದು ಅವರ ಮೇಲೆ ದಾಳಿ ಮಾಡಿದೆ. ಇದರ ಪರಿಣಾಮ ಗಂಭೀರ ಗಾಯಗೊಂಡ ಅವರು ಮೃತಪಟ್ಟಿದ್ದಾರೆ.

ಈ ಸಂಬಂಧ ಎಚ್.ಡಿ.ಕೋಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಅರಣ್ಯ ಇಲಾಖೆ ಅಧಿಕಾರಿಗಳು ಸೇರಿದಂತೆ ಸಂಬಂಧಪಟ್ಟವರು ತನಿಖೆ ನಡೆಸುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News