​ಕಾಸರಗೋಡು: ಸಮಾಜ ಸೇವಕ ಸಾಯಿರಾಂ ಗೋಪಾಲಕೃಷ್ಣ ಭಟ್ ನಿಧನ

Update: 2022-01-22 14:39 GMT

ಕಾಸರಗೋಡು: ಕೊಡುಗೈ ದಾನಿ, ಸಮಾಜ ಸೇವಕ, ಸಾಯಿರಾಂ ಗೋಪಾಲಕೃಷ್ಣ ಭಟ್ ಅವರು ಶನಿವಾರ ಮಧ್ಯಾಹ್ನ ಕಿಳಿಂಗಾರಿನಲ್ಲಿರುವ ಸ್ವಗೃಹದಲ್ಲಿ ನಿಧನರಾದರು.ಅವರಿಗೆ 85 ವರ್ಷ ವಯಸ್ಸಾಗಿತ್ತು.

ಆರ್ಥಿಕವಾಗಿ ಹಿಂದುಳಿದ ಕುಟುಂಬಗಳನ್ನು ಗುರುತಿಸಿ ಸುಮಾರು 265ರಷ್ಟು ಕುಟುಂಬಗಳಿಗೆ ಮನೆಗಳನ್ನು ನಿರ್ಮಿಸಿ ಕೊಟ್ಟಿದ್ದಾರೆ. ಹಲವು ಮಂದಿಗೆ ಸ್ವ ಉದ್ಯೋಗಕ್ಕೆ ಸಹಾಯ ನೀಡಿದ್ದಾರೆ. ಅಲ್ಲದೆ ಅದೆಷ್ಟೋ ಕುಟುಂಬಗಳಿಗೆ ಆರ್ಥಿವಾಗಿಯೂ ಸಹಕಾರ ನೀಡಿದ್ದರು. ಶ್ರೀ ಸತ್ಯ ಸಾಯಿಬಾಬಾ ಅವರ ಭಕ್ತರಾಗಿ 'ಸಾಯಿರಾಂ ಭಟ್' ಎಂದೇ ಖ್ಯಾತರಾಗಿದ್ದರು. ಕಿಳಿಂಗಾರಿನಲ್ಲಿ ಶ್ರೀ ಸಾಯಿ ಮಂದಿರವನ್ನು ಸ್ಥಾಪಿಸಿದ್ದರು. ಉಚಿತ ಆರೋಗ್ಯ ಶಿಬಿರ ಸಹಿತ ಆನೇಕ ಕಾರ್ಯಕ್ರಮಗಳನ್ನು ಅವರು ಹಮ್ಮಿಕೊಂಡಿದ್ದರು.

ಮೃತರು ಪತ್ನಿ, ಪುತ್ರ ಬದಿಯಡ್ಕ ಗ್ರಾಮ ಪಂಚಾಯತ್‌ನ ಮಾಜಿ ಅಧ್ಯಕ್ಷ, ಹಾಲಿ ಸದಸ್ಯ ಕೆ.ಎನ್. ಕೃಷ್ಣ ಭಟ್,  ಇಬ್ಬರು ಪುತ್ರಿಯರು ಹಾಗೂ ಅಪಾರ ಬಂಧು ಬಳಗವನ್ನು ಅಗಲಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News