ರಾಜ್ಯದಲ್ಲಿಂದು 42,470 ಮಂದಿಗೆ ಕೊರೋನ ದೃಢ, 26 ಮಂದಿ ಮೃತ್ಯು

Update: 2022-01-22 16:55 GMT

ಬೆಂಗಳೂರು, ಜ.22: ರಾಜ್ಯದಲ್ಲಿ ಶನಿವಾರ 42,470 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 26 ಮಂದಿ ಸೋಂಕಿಗೆ ಬಲಿಯಾಗಿದ್ದು, 35,140 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 34,25,002ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,563ಕ್ಕೆ ತಲುಪಿದೆ.  
      
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 3,30,447ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

26 ಮಂದಿ ಸಾವು: ಬಾಗಲಕೋಟೆ 3, ಬೆಳಗಾವಿ 3, ಬೆಂಗಳೂರು ನಗರ 6, ಚಾಮರಾಜನಗರ 1, ದಕ್ಷಿಣ ಕನ್ನಡ 3, ಧಾರವಾಡ 1, ಹಾಸನ 1, ಕಲಬುರಗಿ 2, ಕೊಡಗು 1, ಮಂಡ್ಯ 1, ಮೈಸೂರು 1,  ಶಿವಮೊಗ್ಗ 1, ತುಮಕೂರು 1, ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 42,470 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ  ಬಾಗಲಕೋಟೆ 42, ಬಳ್ಳಾರಿ 845, ಬೆಳಗಾವಿ 405, ಬೆಂಗಳೂರು ಗ್ರಾಮಾಂತರ 958, ಬೆಂಗಳೂರು ನಗರ 17,266, ಬೀದರ್ 138, ಚಾಮರಾಜನಗರ 397, ಚಿಕ್ಕಬಳ್ಳಾಪುರ 892, ಚಿಕ್ಕಮಗಳೂರು 166, ಚಿತ್ರದುರ್ಗ 622, ದಕ್ಷಿಣ ಕನ್ನಡ 795, ದಾವಣಗೆರೆ 645, ಧಾರವಾಡ 790, ಗದಗ 306, ಹಾಸನ 2679, ಹಾವೇರಿ 124, ಕಲಬುರಗಿ 665, ಕೊಡಗು 653, ಕೋಲಾರ 1417, ಕೊಪ್ಪಳ 138, ಮಂಡ್ಯ 1822, ಮೈಸೂರು 4601, ರಾಯಚೂರು 236, ರಾಮನಗರ 506, ಶಿವಮೊಗ್ಗ 474, ತುಮಕೂರು 3417, ಉಡುಪಿ 877, ಉತ್ತರ ಕನ್ನಡ 390, ವಿಜಯಪುರ 125, ಯಾದಗಿರಿ  ಜಿಲ್ಲೆಯಲ್ಲಿ 79 ಪ್ರಕರಣ ಪತ್ತೆಯಾಗಿವೆ.  

ರಾಜಧಾನಿಯಲ್ಲಿ 17,266 ಜನರಿಗೆ ಕೊರೋನ ದೃಢ

ಜ.22: ರಾಜಧಾನಿಯಲ್ಲಿ ಶನಿವಾರದಂದು 17,266 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. 6 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 13,24,538 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ. 

ನಗರದಲ್ಲಿ ಇಲ್ಲಿಯವರೆಗೆ ಒಟ್ಟು 15,42,092 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,490 ಜನರು ಸೋಂಕಿಗೆ ಬಲಿಯಾಗಿದ್ದಾರೆ. 
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News