ರಾಜ್ಯದಲ್ಲಿ ರವಿವಾರ 50,210 ಮಂದಿಗೆ ಕೊರೋನ ದೃಢ, 19 ಮಂದಿ ಮೃತ್ಯು
ಬೆಂಗಳೂರು, ಜ.23: ರಾಜ್ಯದಲ್ಲಿ ರವಿವಾರ 50,210 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 19 ಮಂದಿ ಸೋಂಕಿಗೆ ಬಲಿಯಾಗಿದ್ದು, 22,842 ಜನರು ಗುಣಮುಖರಾಗಿದ್ದಾರೆ.
ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 3517682ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 38,582ಕ್ಕೆ ತಲುಪಿದೆ.
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 3,57,796ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.
19 ಮಂದಿ ಸಾವು: ಬಳ್ಳಾರಿ 1, ಬೆಂಗಳೂರು ನಗರ 8, ಚಾಮರಾಜನಗರ 1, ಚಿಕ್ಕಬಳ್ಳಾಪುರ 1, ದಕ್ಷಿಣ ಕನ್ನಡ 1, ಗದಗ 1, ಮೈಸೂರು 1, ರಾಯಚೂರು 1, ಶಿವಮೊಗ್ಗ 2, ತುಮಕೂರು ಜಿಲ್ಲೆಯಲ್ಲಿ ಇಬ್ಬರು ಸಾವನ್ನಪ್ಪಿದ್ದಾರೆ.
ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 50,210 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 331, ಬಳ್ಳಾರಿ 904, ಬೆಳಗಾವಿ 885, ಬೆಂಗಳೂರು ಗ್ರಾಮಾಂತರ 925, ಬೆಂಗಳೂರು ನಗರ 26299, ಬೀದರ್ 368, ಚಾಮರಾಜನಗರ 664, ಚಿಕ್ಕಬಳ್ಳಾಪುರ 552, ಚಿಕ್ಕಮಗಳೂರು 144, ಚಿತ್ರದುರ್ಗ 246, ದಕ್ಷಿಣ ಕನ್ನಡ 770, ದಾವಣಗೆರೆ 495, ಧಾರವಾಡ 955, ಗದಗ 274, ಹಾಸನ 1922, ಹಾವೇರಿ 165, ಕಲಬುರಗಿ 853, ಕೊಡಗು 1139, ಕೋಲಾರ 824, ಕೊಪ್ಪಳ 510, ಮಂಡ್ಯ 1455, ಮೈಸೂರು 4359, ರಾಯಚೂರು 410, ರಾಮನಗರ 199, ಶಿವಮೊಗ್ಗ 611, ತುಮಕೂರು 1963, ಉಡುಪಿ 947, ಉತ್ತರ ಕನ್ನಡ 641, ವಿಜಯಪುರ 249, ಯಾದಗಿರಿ ಜಿಲ್ಲೆಯಲ್ಲಿ 151 ಪ್ರಕರಣ ಪತ್ತೆಯಾಗಿವೆ.
ರಾಜಧಾನಿಯಲ್ಲಿ 26,299 ಜನರಿಗೆ ಕೊರೋನ ದೃಢ
ರಾಜಧಾನಿಯಲ್ಲಿ ರವಿವಾರದಂದು 26,299 ಜನರಿಗೆ ಕೊರೋನ ಸೋಂಕು ದೃಢಪಟ್ಟಿವೆ. 8 ಮಂದಿ ಸೋಂಕಿಗೆ ಬಲಿಯಾಗಿದ್ದು, ಒಟ್ಟು 13,37,325 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 15,85,657 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,498 ಜನರು ಸೋಂಕಿಗೆ ಬಲಿಯಾಗಿದ್ದಾರೆ.
ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ.