×
Ad

ನಾರಾಯಣಗುರು ಸ್ತಬ್ಧಚಿತ್ರ ವಿವಾದಕ್ಕೂ ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ: ಕೋಟಾ ಶ್ರೀನಿವಾಸ ಪೂಜಾರಿ

Update: 2022-01-24 13:10 IST

ಮಂಗಳೂರು : ಗಣರಾಜ್ಯೋತ್ಸವದಲ್ಲಿ ಶ್ರೀನಾರಾಯಣಗುರುಗಳ ಟ್ಯಾಬ್ಲೋ ತಿರಸ್ಕರಿಸಿರುವ ವಿವಾದಕ್ಕೂ ಪ್ರಧಾನಿ, ಕೇಂದ್ರ ಸರ್ಕಾರಕ್ಕೂ ಸಂಬಂಧ ಇಲ್ಲ ಎಂದು ಸಚಿವ ಕೋಟಾ ಶ್ರೀನಿವಾಸ ಪೂಜಾರಿ ಹೇಳಿದ್ದಾರೆ.

ಮಂಗಳೂರಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ವಿನಾಕಾರಣ ಕೇರಳ ಸರ್ಕಾರ ಈ ಗೊಂದಲ ಸೃಷ್ಟಿ ಮಾಡಿದೆ. ಅದನ್ನು ಕಾಂಗ್ರೆಸ್ ವೈಭವೀಕರಿಸುತ್ತಿದೆ ಎಂದು ದೂರಿದರು.

ಈ ವಿವಾದಕ್ಕೆ ಸಂಬಂಧಿಸಿದಂತೆ ಇಂದು ಕೇಂದ್ರ ಸರ್ಕಾರದ ಮಾಜಿ ಸಚಿವ ಜನಾರ್ದನ ಪೂಜಾರಿ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದೀವಿ. ಈ ವಿಚಾರದಲ್ಲಿ ಕೇರಳದ ಕಮ್ಯುನಿಸ್ಟ್ ಸರ್ಕಾರ ಸುಳ್ಳು ಆರೋಪದಡಿಯಲ್ಲಿ ತೊಡಗಿದೆ. ಇದಕ್ಕೆ ರಾಜ್ಯದಲ್ಲಿ ಕಾಂಗ್ರೆಸ್ ಗೊಂದಲ ಸೃಷ್ಟಿ ಮಾಡುವ ಮತ್ತಷ್ಟು ವಾತವರಣ ಸೃಷ್ಟಿ ಮಾಡುತ್ತಿದೆ ಎಂದು ಅವರು ವಿವರಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News