×
Ad

ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ

Update: 2022-01-24 20:56 IST

ಉಡುಪಿ, ಜ.24: ಪರ್ಯಾಯ ಕೃಷ್ಣಾಪುರ ಮಠದ ಆಶ್ರಯದಲ್ಲಿ ಪರ್ಯಾ ಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಸಮಾರೋಪ ಸಮಾರಂಭ ಸೋಮವಾರ ಶ್ರೀಕೃಷ್ಣಮಠದ ರಾಜಾಂಗಣದ ಜನಾರ್ದನತೀರ್ಥ ವೇದಿಕೆಯಲ್ಲಿ ಜರಗಿತು.

ಈ ಸಂದರ್ಭದಲ್ಲಿ ಪರ್ಯಾಯ ಕೃಷ್ಣಾಪುರ ಮಠಾಧೀಶ ಶ್ರೀವಿದ್ಯಾಸಾಗರ ತೀರ್ಥ ಸ್ವಾಮೀಜಿ ಮಾತನಾಡಿ, ಧಾರ್ಮಿಕ ಪ್ರಜ್ಞೆಯನ್ನು ಬೆಳೆಸಲು ಸಾಂಸ್ಕೃತಿಕ ಕಲಾಪ್ರಕಾರಗಳು ಬಹಳ ಸಹಕಾರಿಯಾಗಿವೆ. ಪುರಾಣದಲ್ಲಿ ಬರುವ ಕಥೆಗಳನ್ನು ಕಲೆಗಳ ಮುಖಾಂತರ ತಿಳಿಸಿ ಸುಲಭವಾಗಿ ಧಾರ್ಮಿಕ ಪ್ರಜ್ಞೆಯನ್ನು ಬೆಳೆಸ ಬಹುದು. ಕರಾವಳಿಯ ಹಾಗೂ ದೇಶದ ಎಲ್ಲ ಪ್ರಕಾರಗಳನ್ನು ಆಳ್ವರು ತಮ್ಮ ಸಂಸ್ಥೆಯ ವಿದ್ಯಾರ್ಥಿಗಳಿಗೆ ತರಬೇತಿ ನೀಡಿ ಎಲ್ಲ ಕಡೆ ಪ್ರದರ್ಶಿಸಿ ಕಲೆಗಳಿಗೆ ಹಾಗೂ ಕಲಾವಿದರಿಗೆ ಪ್ರೋತ್ಸಾಹ ನೀಡುತ್ತಿದ್ದಾರೆ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಡಾ. ಮೋಹನ ಆಳ್ವ ಸನ್ಮಾನಿಸಲಾಯಿತು. ಪರ್ಯಾಯೋತ್ಸವ ಸಮಿತಿಯ ಗೌರವಾಧ್ಯಕ್ಷ ಕೆ.ಸೂರ್ಯನಾರಾಯಣ ಉಪಾಧ್ಯಾಯ, ಪ್ರಧಾನ ಕಾರ್ಯದರ್ಶಿ ವಿಷ್ಣುಪ್ರಸಾದ್ ಪಾಡಿಗಾರು, ಖಜಾಂಚಿ ರವಿಪ್ರಸಾದ್ ಉಪಸ್ಥಿತರಿದ್ದರು. ಸಾಂಸ್ಕೃತಿಕ ಕಾರ್ಯಕ್ರಮ ವಿಭಾಗದ ಸಂಚಾಲಕ ಪ್ರೊ.ಎಂ.ಎಲ್. ಸಾಮಗ ಕಾರ್ಯಕ್ರಮ ನಿರೂಪಿಸಿ, ವಂದಿಸಿದರು.

ಬಳಿಕ ಪರ್ಯಾಯೋತ್ಸವದ ಸಾಂಸ್ಕೃತಿಕ ಕಾರ್ಯಕ್ರಮಗಳ ಅಂಗವಾಗಿ ಮೂಡಬಿದರೆಯ ಆಳ್ವಾಸ್ ಶಿಕ್ಷಣ ಸಂಸ್ಥೆಯ ವಿದ್ಯಾರ್ಥಿಗಳಿಂದ ಸಾಂಸ್ಕೃತಿಕ ವೈಭವ ನಡೆಯಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News