ಸುಳ್ಯ : ಮಗನಿಗೆ ಕತ್ತಿಯಿಂದ ಕಡಿದ ತಂದೆ

Update: 2022-01-25 09:44 GMT

ಸುಳ್ಯ: ತಂದೆ ಮತ್ತು ಮಗನ ಮಧ್ಯೆ ಮಾತಿನ ಚಕಮಕಿ ನಡೆದು ತಂದೆ ಮಗನಿಗೆ ಕತ್ತಿಯಿಂದ ಕಡಿದ ಘಟನೆ ಸುಳ್ಯ ತಾಲೂಕಿನ ಆಲೆಟ್ಟಿ ಗ್ರಾಮದ ಗುಂಡ್ಯ ಎಂಬಲ್ಲಿ ನಡೆದಿದೆ.

ಗುಂಡ್ಯ ನಿವಾಸಿ ಐತಪ್ಪ ನಾಯ್ಕ ಮತ್ತು ಅವರ ಮಗ ಜಯಪ್ರಕಾಶ್ ಮಧ್ಯೆ ಮಾತಿನ ಚಕಮಕಿಯಾಗಿ ಹೊಡೆದಾಟ ನಡೆದಿದೆ ಎನ್ನಲಾಗಿದೆ. ಗಂಭೀರವಾಗಿ ಗಾಯಗೊಂಡ ಪುತ್ರನನ್ನು ಮಂಗಳೂರಿನ ಆಸ್ಪತ್ರೆಗೆ ದಾಖಲಿಸಲಾಗಿದೆ.

ಈ ಬಗ್ಗೆ ಸುಳ್ಯ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News