​ಕಾರ್ಕಳ : ಪತ್ರಕರ್ತರು, ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ

Update: 2022-01-25 11:57 GMT

ಕಾರ್ಕಳ : ಕಾರ್ಕಳ ತಾಲೂಕಿನ ಪತ್ರಕರ್ತರು ಹಾಗೂ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಣೆ ಕಾರ್ಯಕ್ರಮವು ಕಾರ್ಕಳ ಪ್ರವಾಸಿ ಮಂದಿರದಲ್ಲಿ ಕಾರ್ಕಳ ತಾಲೂಕು ಕಾರ್ಯ ನಿರತ ಪತ್ರಕರ್ತರ ಸಂಘದ ಅಧ್ಯಕ್ಷ ಮೊಹಮ್ಮದ್ ಶರೀಫ್ ಅವರ ಅಧ್ಯಕ್ಷತೆಯಲ್ಲಿ ಜರುಗಿತು.

ಕಾರ್ಕಳ ಕೆ ಇ ಎಂ ಎಸ್ ಶಿಕ್ಷಣ ಸಂಸ್ಥೆಗಳ ಅಧ್ಯಕ್ಷ ಕೆ ಎಸ್ ಇಮ್ತಿಯಾಝ್ ಅಹ್ಮದ್ ಪತ್ರಕರ್ತರು ಹಾಗೂ ಅವರ ಕುಟುಂಬದ ಸದಸ್ಯರಿಗೆ ಕನ್ನಡಕ ವಿತರಿಸಿ ಶುಭಾಶಂಸನೆಗೈದರು.

ಈ ಸಂದರ್ಭದಲ್ಲಿ ಉಡುಪಿ ಜಿಲ್ಲಾ ಪತ್ರಕರ್ತರ ಸಂಘದ ಉಪಾಧ್ಯಕ್ಷ ಆರ್ ಬಿ ಜಗದೀಶ್, ಕಾರ್ಕಳ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘದ ಕಾರ್ಯದರ್ಶಿ ಕೃಷ್ಣ ನಾಯ್ಕ, ಕೋಶಾಧಿಕಾರಿ ಬಾಲಕೃಷ್ಣ ಭೀಮಹುಳಿ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News