ದಾವಣಗೆರೆ: ಮಾರಕಾಸ್ತ್ರಗಳಿಂದ ಕಡಿದು ವೃದ್ಧ ದಂಪತಿಯ ಹತ್ಯೆ
Update: 2022-01-25 13:39 GMT
ದಾವಣಗೆರೆ: ಎಲೆಬೇತೂರು ಗ್ರಾಮದಲ್ಲಿ ವೃದ್ಧ ದಂಪತಿಯನ್ನು ಬರ್ಬರವಾಗಿ ಕೊಲೆ ಮಾಡಿರುವ ಘಟನೆ ನಡೆದಿದೆ.
ಗುರುಸಿದ್ದಯ್ಯ (80) ಸರೋಜಮ್ಮ (75) ಕೊಲೆಯಾದ ದಂಪತಿ.
ಸೋಮವಾರ ತಡರಾತ್ರಿ ಮನೆಗೆ ನುಗ್ಗಿದ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಕೊಚ್ಚಿ ಕೊಲೆ ಮಾಡಿ ಪರಾರಿಯಾಗಿದ್ದಾರೆ ಎಂದು ತಿಳಿದು ಬಂದಿದೆ. ದಂಪತಿಗೆ ಮೂವರು ಹೆಣ್ಣು ಮಕ್ಕಳು ಇದ್ದು ಎಲ್ಲರಿಗೂ ಮದುವೆ ಮಾಡಿಕೊಟ್ಟಿದ್ದಾರೆ. ಮನೆಯಲ್ಲಿ ಪತಿ-ಪತ್ನಿ ಇಬ್ಬರೇ ವಾಸವಾಗಿದ್ದರು ಎನ್ನಲಾಗಿದೆ.
ಪಕ್ಕದ ಮನೆಯವರು ಮಂಗಳವಾರ ಬೆಳಗ್ಗೆ ಸರೋಜಮ್ಮ ಅವರನ್ನ ಭೇಟಿ ಮಾಡಲು ಬಂದಾಗ ಪ್ರಕರಣ ಬೆಳಕಿಗೆ ಬಂದಿದೆ.
ಶ್ವಾನದಳ ಹಾಗೂ ಬೆರಳಚ್ಚು ತಜ್ಞ ತಂಡ ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.