ಕಾಸರಗೋಡು : ಕಾರು ಅಪಘಾತ; ಗಾಯಾಳು ವಿದ್ಯಾರ್ಥಿ ಮೃತ್ಯು
Update: 2022-01-25 14:13 GMT
ಕಾಸರಗೋಡು : ಕಾರು ಅಪಘಾತದಲ್ಲಿ ಗಂಭೀರ ಗಾಯ ಗೊಂಡು ಮಂಗಳೂರು ಆಸ್ಪತ್ರೆಗೆ ದಾಖಲಿಸಲಾಗಿದ್ದ ವಿದ್ಯಾರ್ಥಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟ ಘಟನೆ ನಡೆದಿದೆ.
ಪುಲ್ಲೂರು ವಿಷ್ಣು ಮಂಗಲದ ಅಖಿಲ್ ರಾಜ್ (19) ಮೃತರು ಎಂದು ಗುರುತಿಸಲಾಗಿದೆ.
ಐಟಿಐ ವಿದ್ಯಾರ್ಥಿಯಾಗಿದ್ದ ಅಖಿಲ್ ರಾಜ್ ಅವರು ಒಂದು ವಾರದ ಹಿಂದೆ ನಡೆದ ಕಾರು ಅಪಘಾತದಲ್ಲಿ ಗಾಯಗೊಂಡಿದ್ದರು. ಅಖಿಲ್ ರಾಜ್ ಹಾಗೂ ಸ್ನೇಹಿತರು ಸಂಚರಿಸುತ್ತಿದ್ದ ಕಾರು ಜಿಲ್ಲಾಸ್ಪತ್ರೆ ಸಮೀಪ ಪಲ್ಟಿ ಹೊಡೆದ ಪರಿಣಾಮ ಗಂಭೀರ ಗಾಯಗೊಂಡಿದ್ದರು. ಅಖಿಲ್ ರಾಜ್ ರನ್ನು ಮಂಗಳೂರು ಆಸ್ಪತ್ರೆ ಗೆ ದಾಖಲಿಸಲಾಗಿತ್ತು ಆದರೆ ಚಿಕಿತ್ಸೆಗೆ ಸ್ಪಂದಿಸದೆ ಇಂದು ಮೃತಪಟ್ಟಿದ್ದಾರೆ ಎಂದು ತಿಳಿದುಬಂದಿದೆ.
ಈ ಬಗ್ಗೆ ಇಲ್ಲಿನ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.