ಶ್ರೀರಂಗಪಟ್ಟಣ: ಲಂಚ ಪಡೆಯುತ್ತಿದ್ದಾಗ ಎಸಿಬಿ ಬಲೆಗೆ ಬಿದ್ದ ಸರ್ವೆ ಅಧಿಕಾರಿ

Update: 2022-01-25 14:33 GMT
 ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ

ಶ್ರೀರಂಗಪಟ್ಟಣ, ಜ.25: ಜಮೀನು ದುರಸ್ತಿಗೆ 10 ಸಾವಿರ ರೂ. ಲಂಚ ಪಡೆಯುತ್ತಿದ್ದ ವೇಳೆ ಸರ್ವೆ ಅಧಿಕಾರಿ ಎಸಿಬಿ ಬಲೆಗೆ ಬಿದ್ದಿರುವ ಘಟನೆ ನಡೆದಿದೆ.

ಶ್ರೀರಂಗಪಟ್ಟಣ ಮಿನಿವಿಧಾನಸೌಧದ ಭೂಮಾಪನ ಇಲಾಖೆಯ ಸರ್ವೇ ಸೂಪರ್ ವೈಸರ್  ಲೋಕೇಶ್ ಎಸಿಬಿ ಬಲೆಗೆ ಬಿದ್ದ ಅಧಿಕಾರಿ. 

ರೈತರೊಬ್ಬರಿಂದ ಜಮೀನು ದುರಸ್ತಿಗೆ 15 ಸಾವಿರ ರೂ. ಲಂಚಕ್ಕೆ ಬೇಡಿಕೆಯಿಟ್ಟಿದ್ದ ಲೋಕೇಶ್  3 ಸಾವಿರ ರೂ. ಮುಂಗಡ ಪಡೆದಿದ್ದು, ಉಳಿದ 10 ಸಾವಿರ ರೂ. ಪಡೆಯುತ್ತಿದ್ದಾಗ ಎಸಿಬಿ ಅಧಿಕಾರಿಗಳು ಬಂದಿದ್ದಾರೆ.

ಲೋಕೇಶ್ ವಿರುದ್ಧ ಎಸಿಬಿ ಕಚೇರಿಗೆ ಸಾರ್ವಜನಿಕರಿಂದ ಹಲವು ದೂರುಗಳು ಕೇಳಿಬಂದಿದ್ದವು ಎನ್ನಲಾಗಿದೆ. ಇದಕ್ಕಾಗಿ ಕಾಯುತ್ತಿದ್ದ ಎಸಿಬಿ ಅಧಿಕಾರಿಗಳು ಇಂದು ಲಂಚ ಪಡೆಯುತ್ತಿದ್ದ ಲೋಕೇಶ್ ಅವರನ್ನು ವಶಕ್ಕೆ ಪಡೆದರು.

ಎಸಿಬಿ ಡಿವೈಎಸ್ಪಿ ಧರ್ಮೇಂದ್ರ ನೇತೃತ್ವದಲ್ಲಿ ಈ ದಾಳಿ ನಡೆಸಿದ್ದು, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News