ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವ ಪಡೆದ ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ
Update: 2022-01-25 17:32 GMT
ಬೆಂಗಳೂರು, ಜ.25: ಮಾಜಿ ಪ್ರಧಾನಿ ಹೆಚ್.ಡಿ. ದೇವೇಗೌಡ ಸೋಮವಾರದಂದು ಕನ್ನಡ ಸಾಹಿತ್ಯ ಪರಿಷತ್ತಿನ ಆಜೀವ ಸದಸ್ಯತ್ವವನ್ನು ಪಡೆದರು ಎಂದು ಪರಿಷತ್ ಪ್ರಕಟನೆಯಲ್ಲಿ ತಿಳಿಸಿದೆ.
ಕನ್ನಡ ಸಾಹಿತ್ಯ ಪರಿಷತ್ತಿನ ನಡೆ- ಕನ್ನಡಿಗರ ಕಡೆ ಎಂಬ ಆಶಯದೊಂದಿಗೆ ಒಂದು ಕೋಟಿ ಸದಸ್ಯತ್ವದ ಗುರಿಯನ್ನು ಹೊಂದಿದ್ದು, ಮಹನೀಯರುಗಳ ಮನೆ ಮನೆಗೆ ಹೋಗಿ, ಆಜೀವ ಸದಸ್ಯತ್ವ ನೋಂದಣಿ ಮಾಡಿಸಲಾಗುವುದು. ಈ ನಿಟ್ಟಿನಲ್ಲಿ ಹೆಚ್.ಡಿ. ದೇವೇಗೌಡರಿಗೆ ಆಜೀವ ಸದಸ್ಯತ್ವವನ್ನು ನೀಡಲಾಗಿದೆ ಎಂದು ತಿಳಿಸಿದೆ.
ಮುಂಬರುವ ದಿನಗಳಲ್ಲಿ ರಾಜ್ಯದ ಗಣ್ಯರಿಗೆ ಆಜೀವ ಸದಸ್ಯತ್ವವನ್ನು ನೀಡಿ, ಜನಸಾಮಾನ್ಯರನ್ನು ಸದಸ್ಯತ್ವ ಪಡೆದುಕೊಳ್ಳುವಂತೆ ಮಾಡಲಾಗುವುದು. ಪರಿಷತ್ತನ್ನು ಜನಸಾಮಾನ್ಯರ ಪರಿಷತ್ತನ್ನಾಗಿ ಪರಿವರ್ತಿಸಿ, ಕನ್ನಡಿಗರ ಏಕೈಕ ಪ್ರಾತಿನಿಧಿಕ ಸಂಸ್ಥೆಯನ್ನಾಗಿಸಲಾಗುವುದು ಎಂದು ಕನ್ನಡ ಸಾಹಿತ್ಯ ಪರಿಷತ್ತಿನ ಅಧ್ಯಕ್ಷ ಮಹೇಶ ಜೋಶಿ ಪ್ರಕಟನೆಯಲ್ಲಿ ತಿಳಿಸಿದ್ದಾರೆ.