ಪೊಲೀಸ್ ಠಾಣೆಗಳ ಮೇಲ್ದರ್ಜೆಗೆ 500 ಕೋಟಿ ಮೀಸಲು: ಆರಗ ಜ್ಞಾನೇಂದ್ರ
Update: 2022-01-25 19:05 GMT
ಶಿವಮೊಗ್ಗ, ಜ.25: ರಾಜ್ಯದಲ್ಲಿ ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲು 500 ಕೋಟಿ ರೂ ಮೀಸಲಿರಿಸಲಾಗಿದೆ. ಈ ಪೈಕಿ ಜಿಲ್ಲೆಯಲ್ಲಿ ನಾಲ್ಕು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲಾಗುವುದು ಎಂದು ಗೃಹ ಸಚಿವ ಆರಗ eನೇಂದ್ರ ಹೇಳಿದರು.
ನಗರದಲ್ಲಿ ಹಿರಿಯ ಪೊಲೀಸ್ ಅಧಿಕಾರಿಗಳೊಂದಿಗೆ ಸಭೆ ನಡೆಸಿದ ನಂತರ ಅವರು ಸುದ್ದಿಗಾರರೊಂದಿಗೆ ಮಾತನಾಡಿದರು.
ಶಿವಮೊಗ್ಗ ಜಿಲ್ಲೆಯಲ್ಲಿ ಕಳೆದ ಮೂರು ವರ್ಷಗಳಿಂದ ಅಪರಾಧಗಳ ಸಂಖ್ಯೆ ಕಡಿಮೆಯಾಗಿದೆ. ಹಾಗೆಯೇ ಕೆಲವು ಪೊಲೀಸ್ ಠಾಣೆಗಳನ್ನು ಮೇಲ್ದರ್ಜೆಗೇರಿಸಲು ಈಗಾಗಲೇ ಕ್ರಮ ಕೈಗೊಳ್ಳಲಾಗಿದೆ. ಆ ನಿಟ್ಟಿನಲ್ಲಿ ಯೋಜನೆ ಕೂಡಾ ಸಿದ್ದವಾಗುತ್ತಿದೆ ಎಂದರು.
ಇದೇ ವೇಳೆ ಜಿಲ್ಲಾ ಉಸ್ತುವಾರಿ ಬದಲಾವಣೆ ವಿಚಾರ ಮುಖ್ಯಮಂತ್ರಿಗಳ ವಿವೇಚನೆಗೆ ಬಿಟ್ಟಿದ್ದು, ನಾವು ಕೆಲಸ ಮಾಡುವವರು ಎಲ್ಲಿಯಾದರೂ ಕೆಲಸ ಮಾಡುತ್ತೇವೆ. ಉಸ್ತುವಾರಿ ಬದಲಾವಣೆ ಬಗ್ಗೆ ಅಸಮಧಾನವಿಲ್ಲ ಎಂದು ಹೇಳಿದರು.
ಈ ಸಂದರ್ಭದಲ್ಲಿ ಎಡಿಜಿಪಿ ಸತೀಶ್, ಎಸ್ಪಿ ಲಕ್ಷ್ಮೀಪ್ರಸಾದ್ ಉಪಸ್ಥಿತರಿದ್ದರು.