ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕ ಅಧ್ಯಕ್ಷರಾಗಿ ಡಾ.ಮಂಜುನಾಥ್ ಆಯ್ಕೆ

Update: 2022-01-26 10:17 GMT

ಮಂಗಳೂರು : ದ.ಕ. ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ ಮಂಗಳೂರು ತಾಲೂಕು ಘಟಕದ ಅಧ್ಯಕ್ಷರಾಗಿ ಡಾ. ಮಂಜುನಾಥ್.ಎಸ್. ರೇವಣ್ ಕರ್ ಅವರು ಆಯ್ಕೆಯಾಗಿರುತ್ತಾರೆ.

ಅವರು ಸೂರಜ್ ಸಮೂಹ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾಗಿದ್ದು, ಕರ್ನಾಟಕ ಅನುದಾನರಹಿತ ಶಿಕ್ಷಣ ಸಂಸ್ಥೆಗಳು ಇದರ ಉಪಾಧ್ಯಕ್ಷರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ.

ತಮ್ಮ ಸಂಸ್ಥೆಯಲ್ಲಿ ರಾಷ್ಟ್ರ ಮಟ್ಟದ ಖ್ಯಾತಿಯ ಸೂರಜ್ ಕಲಾಸಿರಿಯನ್ನು ನಡೆಸಿದ ಕೀರ್ತಿ ಇವರದ್ದು, ಅಲ್ಲದೇ ತಮ್ಮ ಸಂಸ್ಥೆಯಲ್ಲಿ ಸಾಹಿತ್ಯ ಸಮ್ಮೇಳನಗಳನ್ನು ಹಾಗೂ ಸಾಹಿತ್ಯಕ್ಕೆ ಸಂಬಂಧಿಸಿದ ಹಲವಾರು ಕಾರ್ಯಕ್ರಮಗಳನ್ನು ಅಯೋಜಿಸಿ ಮೆಚ್ಚುಗೆ ಪಡೆದಿರುತ್ತಾರೆ.

ಅಂತರ್ ರಾಷ್ಟ್ರೀಯ ಸೇವಾ ಸಂಸ್ಥೆ ರೊಟರಿಯ ಜಿಲ್ಲಾ ಘಟಕದ ಹಲವಾರು ಸೇವಾ ಕಾರ್ಯಕ್ರಮವನ್ನು ನಡೆಸಿದ ಖ್ಯಾತಿ ಇವರಿಗಿದೆ ಹಾಗೂ ಇವರು ಉತ್ತಮ ಸಮಾಜ ಸೇವಕರಾಗಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News