ಪಡುಬಿದ್ರಿ: ವಿದ್ಯುತ್ ಕಂಬಕ್ಕೆ ಲಾರಿ ಢಿಕ್ಕಿ

Update: 2022-01-26 17:17 GMT

ಪಡುಬಿದ್ರಿ: ರಾಷ್ಟ್ರೀಯ ಹೆದ್ದಾರಿ 66ರ ಉಚ್ಚಿಲದಲ್ಲಿ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದು ವಿದ್ಯುತ್ ತಂತಿ ಹೆದ್ದಾರಿಯ ಬದಿಯಲ್ಲಿದ್ದ ಗೂಡಂಗಡಿ ಮೇಲೆ ಬಿದ್ದು, ಅಗ್ನಿ ಅನಾಹುತ ಉಂಟಾಗಿದೆ. 

ಉಚ್ಚಿಲ ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಶ್ರೀ ರಸ್ತು ಹೋಟೆಲ್ ಎದುರು ಬುಧವಾರ ಸಂಜೆ ಲಾರಿಯೊಂದು ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದಿದೆ. ಢಿಕ್ಕಿ ಹೊಡೆದ ಪರಿಣಾಮ ವಿದ್ಯುತ್ ಕಂಬದ ತಂತಿ ಹೆದ್ದಾರಿಗೆ ಅಡ್ಡಲಾಗಿ ಬಿದ್ದಿದೆ. ಇದೇ ಸಂಧರ್ಬ ವಿದ್ಯುತ್ ಹರಿಯುತ್ತಿದ್ದ ತಂತಿಯೊಂದು ಗೂಡಂಗಡಿ ಹೋಟೆಲಿಗೆ ಬಿದ್ದ ಪರಿಣಾಮ ಹೋಟೆಲ್ ಹೊತ್ತಿ ಉರಿದಿದೆ.  ಹೆದ್ದಾರಿಗೆ ವಿದ್ಯುತ್ ತಂತಿ ಅಡ್ಡಲಾಗಿ ಬಿದ್ದ ಪರಿಣಾಮ ಹೆದ್ದಾರಿಯ ಇಕ್ಕಡೆಗಳಲ್ಲಿ ವಾಹನ ಸಂಚಾರ ಅರ್ಧ ತಾಸಿಗೂ ಅಧಿಕ ಸಮಯ ವ್ಯತ್ಯಯ ಉಂಟಾಗಿದೆ.

ತಂತಿ ಬೀಳುತ್ತಿರುವ ಸಂದರ್ಭ ಕೆಎಸ್‍ಆರ್‍ಟಿಸಿ ಬಸೊಂದು ಕೂದಳೆಲೆಯ ಅಂತರದಲ್ಲಿ  ಪಾರಾಗಿದೆ. ಅಲ್ಲದೆ ಮೆಸ್ಕಾಂ ಸಿಬ್ಬಂದಿಗಳು ಸ್ಥಳಕ್ಕೆ ಆಗಮಿಸಿ ಕೂಡಲೇ ತಂತಿ ತಂಡರಿಸಿ ಸುಗಮ ವಾಹನ ಸಂಚಾರಕ್ಕೆ ಅನುವು ಮಾಡಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News