ನನಗೆ ಸಚಿವ ಸ್ಥಾನ ನೀಡಲೇಬೇಕು: ವಿಧಾನಸಭೆ ಉಪಸಭಾಧ್ಯಕ್ಷ ಆನಂದ್ ಮಾಮನಿ

Update: 2022-01-27 13:35 GMT

ಬೆಂಗಳೂರು, ಜ. 27: `ನಾನು ಮೂರು ಬಾರಿ ಶಾಸಕನಾಗಿ ಆಯ್ಕೆಯಾಗಿದ್ದು, ನನಗೆ ಸಚಿವ ಸ್ಥಾನ ಬೇಕೇ ಬೇಕು. ಸಚಿವ ಸ್ಥಾನ ನೀಡಬೇಕೆಂದು ಕೋರಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಪಕ್ಷದ ರಾಜ್ಯಾಧ್ಯಕ್ಷ ನಳಿನ್ ಕುಮಾರ್ ಕಟೀಲ್ ಅವರಿಗೆ ಮನವಿ ಮಾಡುತ್ತೇನೆ' ಎಂದು ವಿಧಾನಸಭೆ ಉಪಸಭಾಧ್ಯಕ್ಷ ಆನಂದ್ ಮಾಮನಿ ತಿಳಿಸಿದ್ದಾರೆ.

ಗುರುವಾರ ವಿಧಾನಸೌಧದಲ್ಲಿ ಮಾಧ್ಯಮ ಪ್ರತಿನಿಧಿಗಳೊಂದಿಗೆ ಮಾತನಾಡಿದ ಅವರು, `ನಾನು ನನ್ನ ಕ್ಷೇತ್ರ, ರಾಜ್ಯದ ಕೆಲಸ ಮಾಡಲು ಅವಕಾಶ ಕೊಡಬೇಕು. ಹೀಗಾಗಿ, ಸಚಿವ ಸ್ಥಾನ ನೀಡುವಂತೆ ಪಕ್ಷದ ನಾಯಕರನ್ನು ಒತ್ತಾಯಿಸಿದ್ದೇನೆ. ಸಚಿವ ಸಂಪುಟ ವಿಸ್ತರಣೆಯನ್ನಾದರೂ ಮಾಡಲಿ ಅಥವಾ ಪುನಾರಚನೆಯನ್ನಾದರೂ ಮಾಡಲಿ. ನನಗೆ ಸಚಿವ ಸ್ಥಾನ ಬೇಕೇ ಬೇಕು' ಎಂದು ಹೇಳಿದರು.

ಇದನ್ನೂ ಓದಿ: ಅಧಿಕಾರ, ಸ್ಥಾನಮಾನ ನೀಡಿದ ಬಿಜೆಪಿ ತೊರೆಯುವ ಪ್ರಶ್ನೆಯೇ ಇಲ್ಲ: ಗೋಪಾಲಯ್ಯ

`ಕೇವಲ ಕ್ಷೇತ್ರದ ಅಭಿವೃದ್ಧಿ ಕಾರಣಕ್ಕೆ ನಾನು ಸಚಿವ ಸ್ಥಾನ ಕೇಳುತ್ತಿಲ್ಲ. ಕ್ಷೇತ್ರದ ಜೊತೆ ರಾಜ್ಯದ ಕೆಲಸವನ್ನೂ ಮಾಡುತ್ತೇನೆ. ನನಗೆ ಈ ಬಾರಿ ಸಚಿವ ಸ್ಥಾನ ಕೊಡಲೇಬೇಕು. ಹಿರಿಯರನ್ನು ಸಂಪುಟದಿಂದ ಕೈಬಿಡುವ ಕುರಿತು ನಾನು ಪ್ರತಿಕ್ರಿಯೆ ನೀಡುವುದಿಲ್ಲ. ಆ ಕುರಿತು ಮುಖ್ಯಮಂತ್ರಿ ಮತ್ತು ಪಕ್ಷದ ವರಿಷ್ಠರು ತೀರ್ಮಾನ ಮಾಡಲಿದ್ದಾರೆ' ಎಂದು ಆನಂದ್ ಮಾಮನಿ ಸ್ಪಷ್ಟಪಡಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News