ಮಂಗಳೂರು ವಿಮಾನ ನಿಲ್ದಾಣದಲ್ಲಿ ಗೃಹ ಕೈಗಾರಿಕಾ ಉತ್ಪನ್ನ ಮೇಳ ಆರಂಭ
Update: 2022-01-27 15:44 GMT
ಮಂಗಳೂರು, ಜ.27: ದೇಶದ ಸ್ವಾತಂತ್ರದ ಅಮೃತ ಮಹೋತ್ಸವದ ಅಂಗವಾಗಿ ಖಾದಿ ಗ್ರಾಮೋದ್ಯೋಗ ಆಯೋಗವು ಮಂಗಳೂರು ವಿಮಾನ ನಿಲ್ದಾಣದಲ್ಲಿ ಆಯೋಜಿಸಿದ ಗೃಹ ಕೈಗಾರಿಕಾ ಉತ್ಪನ್ನಗಳ ಮೇಳಕ್ಕೆ ವಿಮಾನ ನಿಲ್ದಾಣದ ಮುಖ್ಯಸ್ಥ ಧರ್ಮೇಶ್ ಮೆಹ್ತಾ ಹಾಗೂ ಆಯೋಗದ ನಿರ್ದೇಶಕ ಸೆಂಥಿಲ್ ಕುಮಾರ್ ರಾಮಸ್ವಾಮಿ ಇತ್ತೀಚೆಗೆ ಚಾಲನೆ ನೀಡಿದರು.
ಗೃಹ ಕೈಗಾರಿಕಾ ಉತ್ಪನ್ನಗಳನ್ನು ಒಂದು ತಿಂಗಳ ಕಾಲ ವಿಮಾನ ನಿಲ್ದಾಣದಲ್ಲಿ ಪ್ರದರ್ಶಿಸಲಾಗುತ್ತಿದೆ. ದೇಶಿ ಹಾಗೂ ಸ್ವದೇಶಿ ಪ್ರವಾಸಿಗರ ಗಮನ ಸೆಳೆಯಲು ಹಾಗೂ ಗುಡಿ ಕೈಗಾರಿಕಾ ಉತ್ಪನ್ನಗಳನ್ನು ಸ್ವದೇಶದಲ್ಲಿಯೇ ಉತ್ಪಾದಿಸಿ ಮಾರಾಟ ಮಾಡುವ ಉದ್ದೇಶದಿಂದ ಈ ಮೇಳ ನಡೆಸಲಾಗುತ್ತದೆ ಎಂದು ಪ್ರಕಟನೆ ತಿಳಿಸಿದೆ.