ಬೆಂಗಳೂರು: ಪತ್ನಿ ಸಾವನ್ನಪ್ಪಿದ ಬೆನ್ನಲ್ಲೇ ಪತಿ ಆತ್ಮಹತ್ಯೆ

Update: 2022-01-27 18:01 GMT

ಬೆಂಗಳೂರು, ಜ.27: ಅನಾರೋಗ್ಯದಿಂದ ಬಳಲುತ್ತಿದ್ದ ಪತ್ನಿ ಸಾವನ್ನಪ್ಪಿದ್ದು, ಇದರಿಂದ ಮನನೊಂದ ಪತಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ವರದಿಯಾಗಿದೆ.

ದೇವನಹಳ್ಳಿ ತಾಲೂಕಿನ ಬೂದಿಗೆರೆ ಗ್ರಾಮದ ಸಿದ್ದಗಂಗಾ ಶಾಲೆಯ ಸಮೀಪ ಈ  ಘಟನೆ ನಡೆದಿದ್ದು, ಪತ್ನಿಲಾವಣ್ಯ ಅನಾರೋಗ್ಯದಿಂದ ಸಾವನ್ನಪ್ಪಿದ್ದಾರೆ. ಇದರಿಂದ ಮನನೊಂದ ಪತಿ ವಿಜಯೇಂದ್ರ(38) ನೇಣಿಗೆ ಶರಣಾಗಿದ್ದಾನೆ ಎಂದು ತಿಳಿದುಬಂದಿದೆ.

9 ವರ್ಷಗಳ ಹಿಂದೆ ಮದುವೆಯಾಗಿದ್ದ ಇಬ್ಬರು ಬೂದಿಗ್ರಾಮದಲ್ಲಿ ವಾಸವಾಗಿದ್ದರು, ದಂಪತಿಗೆ ಮಕ್ಕಳು ಇರಲಿಲ್ಲ, ಅನಾರೋಗ್ಯದಿಂದ ಬಳಲುತ್ತಿದ್ದ ಲಾವಣ್ಯ ಗುರುವಾರ ಬೆಳಗ್ಗೆ ಮನೆಯಲ್ಲಿ ಸಾವನ್ನಪ್ಪಿದ್ದಾರೆ.

ಪತ್ನಿ ಸಾವಿನಿಂದ ಮನನೊಂದ ಪತಿ ಹೆಂಡತಿ ಸಾವಿನ ಬಗ್ಗೆ ಯಾರಿಗೂ ಹೇಳದೆ ಮನೆಯಲ್ಲಿ ನೇಣಿಗೆ ಶರಣಾಗಿದ್ದಾನೆ. ಈ ಸಂಬಂಧ ಸ್ಥಳೀಯ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News