ಸಚಿವ ಸಂಪುಟ ವಿಸ್ತರಣೆ ಬಗ್ಗೆ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದೇನು?

Update: 2022-01-28 12:16 GMT
 ಬಸವರಾಜ ಬೊಮ್ಮಾಯಿ

ಬೆಂಗಳೂರು, ಜ. 28: 'ಸಚಿವ ಸಂಪುಟ ವಿಸ್ತರಣೆ ಸಂಬಂಧ ಪಕ್ಷದ ವರಿಷ್ಠರ ಭೇಟಿಗೆ ಸಮಯವಕಾಶವನ್ನು ಕೋರಿದ್ದು, ಅವಕಾಶ ನೀಡಿದರೆ ಕೂಡಲೇ ಹೊಸದಿಲ್ಲಿಗೆ ತೆರಳಿ ಅವರೊಂದಿಗೆ ಸಮಾಲೋಚನೆ ನಡೆಸಿ ತೀರ್ಮಾನ ಕೈಗೊಳ್ಳಲಾಗುವುದು' ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಸ್ಪಷ್ಟಣೆ ನೀಡಿದ್ದಾರೆ.

ಶುಕ್ರವಾರ ನಗರದಲ್ಲಿ ಮಾಧ್ಯಮ ಪ್ರತಿನಿಧಿಗಳ ಜತೆ ಮಾತನಾಡಿದ ಅವರು, 'ಮಾಜಿ ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರು ನನಗೆ ಆಶೀರ್ವಾದ ಮಾಡಿದ್ದಾರೆ. ಅಲ್ಲದೆ, ಒಳ್ಳೆಯ ಆಡಳಿತ ನೀಡಿದ್ದೀರಿ. ಹೀಗೆ ಮುಂದುವರೆಯಿರಿ ಎಂದು ಹಾರೈಸಿದ್ದಾರೆ ಎಂದು ತಿಳಿಸಿದರು.

ಇದೇ ವೇಳೆ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, ಯಡಿಯೂರಪ್ಪ ಅವರೊಂದಿಗೆ ಪ್ರತ್ಯೇಕವಾಗಿ 10 ನಿಮಿಷ ಮಾತುಕತೆ ನಡೆಸಿದರು. ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಹಾಗೂ ಸಚಿವರಾದ ಪ್ರಭು ಚೌಹಾಣ್, ಶಂಕರ್ ಪಾಟೀಲ್ ಮುನೇನಕೊಪ್ಪ, ಭೈರತಿ ಬಸವರಾಜ್ ಅವರು ಬಿಎಸ್‌ವೈ ಅವರ ಆಶೀರ್ವಾದ ಪಡೆದರು. ಇದಕ್ಕೂ ಮುನ್ನ ಬೊಮ್ಮಾಯಿ ಅವರು ಬಾಲಬ್ರೂಹಿ ಅತಿಥಿಗೃಹದ ಪಕ್ಕದಲ್ಲಿರುವ ಭಗವಾನ್ ಮಾರುತಿ ದೇವಸ್ಥಾನಕ್ಕೆ ಭೇಟಿ ನೀಡಿ ಪೂಜೆ ಸಲ್ಲಿಸಿದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News