ಜ.30 ರಂದು ಕಾನೂನು ಸಚಿವ ಮಾಧುಸ್ವಾಮಿ ಉಡುಪಿಗೆ

Update: 2022-01-28 13:45 GMT

ಉಡುಪಿ, ಜ.28: ರಾಜ್ಯದ ಕಾನೂನು, ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ ಮಾಧುಸ್ವಾಮಿ ಜ.30 ರಂದು ಜಿಲ್ಲೆುಲ್ಲಿ ಪ್ರವಾಸ ಕೈಗೊಳ್ಳಲಿದ್ದಾರೆ

ರವಿವಾರ ಬೆಳಗ್ಗೆ10:30ಕ್ಕೆ ನಗರದ ಆದರ್ಶ ಆಸ್ಪತ್ರೆಯ ನರ್ಸಿಂಗ್ ಕಾಲೇಜಿನ ಉದ್ಘಾಟನಾ ಕಾರ್ಯಕ್ರಮದಲ್ಲಿ ಭಾಗವಹಿಸಿ ಅಪರಾಹ್ನ 12ಕ್ಕೆ ಹೆಬ್ರಿ ತಾಲೂಕು ಶಿವಪುರ ಗ್ರಾಮದ ದೇವಸ್ಥಾನ ಬೆಟ್ಟ ಎಂಬಲ್ಲಿ ಕಾರ್ಕಳ-ಉಡುಪಿ ಉಪವಿಭಾಗದ ಕಿಂಡಿ ಅಣೆಕಟ್ಟು ನಿರ್ಮಾಣ ಕಾಮಗಾರಿಯ ಉದ್ಘಾಟನೆ ನೆರವೇರಿಸಿದ ನಂತರ ತುಮಕೂರಿಗೆ ತೆರಳುವರು ಎಂದು ಪ್ರಕಟಣೆ ತಿಳಿಸಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News