ಅಂಬೇಡ್ಕರ್ ಭಾವಚಿತ್ರಕ್ಕೆ ಅಗೌರವ ಆರೋಪ: ಹೈಕೋರ್ಟ್ ನ್ಯಾಯಾಧೀಶರಿಂದ ಮಾಹಿತಿ ಸಂಗ್ರಹ

Update: 2022-01-30 13:10 GMT

ರಾಯಚೂರು, ಜ. 30: ಸಂವಿಧಾನ ಶಿಲ್ಪಿ ಡಾ.ಬಿ.ಆರ್.ಅಂಬೇಡ್ಕರ್ ಭಾವಚಿತ್ರಕ್ಕೆ ಅಪಮಾನ ಘಟನೆಗೆ ಸಂಬಂಧಿಸಿ ಹೈಕೋರ್ಟ್ ನ್ಯಾಯಮೂರ್ತಿ ಹಾಗೂ ಜಿಲ್ಲಾ ಆಡಳಿತಾತ್ಮಕ ನ್ಯಾಯಾಧೀಶ ಸಚಿನ್ ಶಂಕರ ಮುಗ್ದುಮ್, ರಾಯಚೂರು ನಗರಕ್ಕೆ ಭೇಟಿ ನೀಡಿ ಸ್ಥಳೀಯ ನ್ಯಾಯಾಧೀಶರು, ಸಿಬ್ಬಂದಿಯಿಂದ ಮಾಹಿತಿ ಪಡೆದರು. 

ಯರಮರಸ್ ಅತಿಥಿ ಗೃಹದಲ್ಲಿ ನ್ಯಾಯಾಧೀಶರೊಂದಿಗೆ ಸಭೆ ನಡೆಸಿದ ಅವರು, ನಂತರ ನ್ಯಾಯಾಲಯದ ಸಿಬ್ಬಂದಿ ವಿಚಾರಣೆ ನಡೆಸಿದರು. ದಲಿತ ಸಂಘಟನೆಗಳಿಂದಲೂ ಮನವಿ ಸ್ವೀಕರಿಸಿರುವ ನ್ಯಾಯಾಧೀಶರು, ದೂರನ್ನು ಹೈಕೋರ್ಟ್ ನ್ಯಾಯಮೂರ್ತಿಗಳ ಗಮನಕ್ಕೆ ತರುವ ಭರವಸೆ ನೀಡಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News