ಸಿ.ಎಂ.ಇಬ್ರಾಹೀಂ ಕಾಂಗ್ರೆಸ್ ಪಕ್ಷ ಬಿಡುವ ಪ್ರಶ್ನಯೇ ಇಲ್ಲ: ಯು.ಟಿ.ಖಾದರ್

Update: 2022-01-31 08:47 GMT

ಮಂಗಳೂರು, ಜ.31: ಸಿ.ಎಂ.ಇಬ್ರಾಹೀಂ ಕಾಂಗ್ರೆಸ್ ನ ಹಿರಿಯ ನಾಯಕರು. ಅವರು ಪಕ್ಷ ಬಿಡುವ ಪ್ರಶ್ನೆಯೇ ಇಲ್ಲ. ನನ್ನನ್ನು ವಿಧಾನಸಭೆಯ ಉಪನಾಯಕನನ್ನಾಗಿ ಮಾಡಿದ್ದಕ್ಕೂ ಅವರು ಅಸಮಾಧಾನಕ್ಕೂ ಯಾವುದೇ ಸಂಬಂಧ ಇಲ್ಲ ಎಂದು ವಿಧಾನಸಭೆಯ ಉಪನಾಯಕ, ಶಾಸಕ ಯು.ಟಿ.ಖಾದರ್ ಪ್ರತಿಕ್ರಿಯಿಸಿದ್ದಾರೆ.

ಸುದ್ದಿಗೋಷ್ಠಿಯಲ್ಲಿಂದು ಮಾತನಾಡಿದ ಅವರು, ಸಿ.ಎಂ‌.ಇಬ್ರಾಹೀಂರನ್ನು ಹಿಂದೆಯೂ ಪಕ್ಷ ಗುರುತಿಸಿದೆ. ಮುಂದೆಯೂ ಗುರುತಿಸಲಿದೆ ಎಂದವರು ಹೇಳಿದರು.

ಪಕ್ಷ ಎಂದಿಗೂ ಅಂಬೇಡ್ಕರ್ ಅವರ ಸಂವಿಧಾನ, ಮಹಾತ್ಮ ಗಾಂಧಿಯವರ ತತ್ವ ಸಿದ್ಧಾಂತಗಳ ಆಧಾರದಲ್ಲಿ ಕಾರ್ಯಾಚರಿಸುತ್ತದೆ. ವಿಧಾನಸಭೆ  ಉಪನಾಯಕನಾಗಿ ನನ್ನ ಮೇಲಿನ ಜವಾಬ್ದಾರಿ ಹೆಚ್ಚಾಗಿದೆ. ಇದು ಸ್ಥಾನ ಮಾನಕ್ಕಿಂತಲೂ ಹೆಚ್ಚಿನ ಜವಾಬ್ದಾರಿ. ಸರಕಾರದ ವೈಫಲ್ಯಗಳನ್ನು ಇನ್ನಷ್ಟು ಸಮರ್ಥವಾಗಿ ಬಿಂಬಿಸಿ ಹೋರಾಟ ಮಾಡುವ ಜವಾಬ್ದಾರಿ ಎಂದು ಖಾದರ್ ಹೇಳಿದರು.

ಸುದ್ದಿಗೋಷ್ಠಿಯಲ್ಲಿ ಮಾಜಿ ಸಚಿವ ಕೆ.ಅಭಯಚಂದ್ರ ಜೈನ್, ಮುಖಂಡರಾದ ಮುಹಮ್ಮದ್ ಮೋನು, ಸಂತೋಷ್ ಕುಮಾರ್, ಲುಕ್ಮಾನ್, ಶುಭೋದಯ ಆಳ್ವ, ಮೋಹನ್, ಆಲ್ವಿನ್ ಪ್ರಕಾಶ್, ಟಿ.ಕೆ.ಸುಧೀರ್ ಮೊದಲಾದವರು ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News