×
Ad

ಗಂಗೊಳ್ಳಿ ಖಾರ್ವಿಕೇರಿ ಜಾತ್ರೆ: ಮದ್ಯ ಮಾರಾಟ ನಿಷೇಧ

Update: 2022-01-31 21:37 IST

ಉಡುಪಿ, ಜ.31:ಕುಂದಾಪುರ ತಾಲೂಕು ಗಂಗೊಳ್ಳಿ ಖಾರ್ವಿಕೇರಿಯ ಶ್ರೀ ಮಹಾಕಾಳಿ ಅಮ್ಮನವರ ಜಾತ್ರಾ ಮಹೋತ್ಸವ ಹಾಗೂ ಮಾರಿ ಜಾತ್ರೆಯು ಫೆ.1ಮತ್ತು 2ರಂದು ನಡೆಯಲಿದ್ದು, ಸಾವಿರಾರು ಭಕ್ತರು ಜಾತ್ರೆಗೆ ಆಗಮಿಸುವ ಹಿನ್ನೆಲೆಯಲ್ಲಿ ಕಾನೂನು ಸುವ್ಯವಸ್ಥೆ ಹಾಗೂ ಸಾರ್ವಜನಿಕ ಶಾಂತಿ ಕಾಪಾಡುವ ದೃಷ್ಟಿಯಿಂದ ರಾಜ್ಯ ಅಬಕಾರಿ ಕಾಯ್ದೆಯನ್ವಯ ಫೆ.1ರ ಬೆಳಗ್ಗೆ 6 ರಿಂದ ರಾತ್ರಿ 12 ರವರೆಗೆ ಗಂಗೊಳ್ಳಿ ಪೊಲೀಸ್ ಠಾಣಾ ವ್ಯಾಪ್ತಿಯ ಗಂಗೊಳ್ಳಿ, ಗುಜ್ಜಾಡಿ ಹಾಗೂ ತ್ರಾಸಿ ಗ್ರಾಮಗಳಲ್ಲಿ ಮದ್ಯ ಮಾರಾಟದ ಸನ್ನದುಗಳನ್ನು ಹೊಂದಿರುವ ಬಾರ್ ರೆಸ್ಟೋರೆಂಟ್ ಮತ್ತು ವೈನ್‌ಶಾಪ್‌ಗಳಲ್ಲಿ ಮದ್ಯ ಮಾರಾಟವನ್ನು ಮುಚ್ಚಲು ಆದೇಶಿಸಿ, ಈ ಮೇಲ್ಕಂಡ ಗ್ರಾಮಗಳ ವ್ಯಾಪ್ತಿಯಲ್ಲಿ ಒಣದಿನ ಎಂದು ಘೋಷಿಸಿ, ಮದ್ಯ ಮಾರಾಟವನ್ನು ನಿಷೇಧಿಸಿ, ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ದಂಡಾಧಿಕಾರಿ ಕೂರ್ಮಾರಾವ್ ಎಂ ಆದೇಶಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News