ರಾಜ್ಯ ಸರಕಾರ ರೈತರಿಗೆ ಗಾಂಜಾ ಬೆಳೆಯಲು ಅನುಮತಿ ನೀಡಬೇಕು ಎಂದ ಬಿಜೆಪಿ ಸಂಸದ ಪ್ರತಾಪ್ ಪಾಟೀಲ್ !

Update: 2022-01-31 16:31 GMT

ಮುಂಬೈ: ಮಹಾರಾಷ್ಟ್ರ ಸರ್ಕಾರವು ಸೂಪರ್‌ಮಾರ್ಕೆಟ್‌ಗಳು ಮತ್ತು ವಾಕ್-ಇನ್ ಸ್ಟೋರ್‌ಗಳಲ್ಲಿ ವೈನ್ ಮಾರಾಟಕ್ಕೆ ಅನುಮತಿ ನೀಡಿರುವುದಕ್ಕೆ ವಿರೋಧ ವ್ಯಕ್ತಪಡಿಸಿರುವ ಬಿಜೆಪಿ ಸಂಸದ ಪ್ರತಾಪ್ ಪಾಟೀಲ್ ಚಿಖಿಲಾರ್, ರಾಜ್ಯ ಸರ್ಕಾರವು ರೈತರಿಗೆ ಗಾಂಜಾ ಬೆಳೆಯಲು ಅನುಮತಿ ನೀಡಬೇಕು ಎಂದು ಟೀಕಿಸಿದ್ದಾರೆ.

ಭಾನುವಾರ ಸುದ್ದಿಗಾರರೊಂದಿಗೆ ಮಾತನಾಡಿದ ಸಂಸದ ಪ್ರತಾಪ್, ವೈನ್ ಮಾರಾಟಕ್ಕೆ ಸಂಬಂಧಿಸಿದಂತೆ ಮಹಾರಾಷ್ಟ್ರ ಸರ್ಕಾರದ ನಿರ್ಧಾರವು ರಾಜ್ಯವನ್ನು ಹಾಳುಮಾಡುತ್ತದೆ ಎಂದು ಹೇಳಿದ್ದಾರೆ.

ಇಂತಹ ಮಳಿಗೆಗಳಲ್ಲಿ ವೈನ್ ಮಾರಾಟ ಮಾಡುವುದರಿಂದ ಹೆಚ್ಚಿನ ಆದಾಯ ಬರುತ್ತದೆ ಎಂದು ಸರ್ಕಾರ ಭಾವಿಸಿದ್ದರೆ, ಗಾಂಜಾ ಬೆಳೆಯಲು ಕೂಡಾ ಅವಕಾಶ ಕೊಡಲಿ, ಅದರಿಂದಲೂ ಆದಾಯ ಬರುತ್ತದೆ ಎಂದು ಹೇಳಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News