×
Ad

​ಉಪ್ಪಿನಂಗಡಿ; ಬಸ್ ಢಿಕ್ಕಿ: ಬೈಕ್ ಸವಾರರಿಬ್ಬರಿಗೆ ಗಾಯ

Update: 2022-02-01 16:30 IST

ಉಪ್ಪಿನಂಗಡಿ: ಬಸ್ಸೊಂದು ಬೈಕ್ ಗೆ ಢಿಕ್ಕಿ ಹೊಡೆದ ಪರಿಣಾಮ ಇಬ್ಬರು ಗಾಯಗೊಂಡ ಘಟನೆ ಉಪ್ಪಿನಂಗಡಿ ಸಮೀಪದ ಪೆದಮಲೆ ಎಂಬಲ್ಲಿ ಮಂಗಳವಾರ ನಡೆದಿದೆ.

ರಾಜಸ್ಥಾನ ಮೂಲದ ಮೋಹನ್ ಸಿಂಗ್ ಹಾಗು ಅಶೋಕ್ ಗಾಯಗೊಂಡವರು.

ಬೈಕ್ ಸವಾರ 34-ನೆಕ್ಕಿಲಾಡಿ ನಿವಾಸಿ, ರಾಜಸ್ಥಾನ್ ಗ್ರಾನೈಟ್ ಸಂಸ್ಥೆಯ ಸಿಬ್ಬಂದಿ ಅಶೋಕ್ ಎಂಬವರು ಗಂಭೀರ ಗಾಯಗೊಂಡಿದ್ದಾರೆ.

ಉಪ್ಪಿನಂಗಡಿಯಿಂದ ಗುರುವಾಯನಕೆರೆ ಕಡೆಗೆ ಹೋಗುತ್ತಿದ್ದ ಬೈಕಿಗೆ ಉಪ್ಪಿನಂಗಡಿ ಕಡೆಗೆ ಬರುತ್ತಿದ್ದ ಕೆಎಸ್ ಆರ್ ಟಿಸಿ ಬಸ್ ಢಿಕ್ಕಿ ಹೊಡೆದಿದೆ. ಗಾಯಾಳುಗಳನ್ನು ಪುತ್ತೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಇಲ್ಲಿನ ಠಾಣೆ ಪೊಲೀಸರು ಘಟನಾ ಸ್ಥಳಕ್ಕೆ ತೆರಳಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News