ರಾಜ್ಯ ಪೊಲೀಸ್ ಮಹಾನಿರ್ದೇಶಕರನ್ನು ಭೇಟಿಯಾದ ಮುಸ್ಲಿಮ್ ಮುತ್ತಹಿದಾ ಮಹಾಝ್ ನಿಯೋಗ

Update: 2022-02-02 07:33 GMT

ಬೆಂಗಳೂರು, ಫೆ.2: ರಾಜ್ಯದಲ್ಲಿ ಇತ್ತೀಚೆಗೆ ಮುಸ್ಲಿಮ್ ಸಮುದಾಯದ ಮೇಲೆ ನಡೆಯುತ್ತಿರುವ ದೌರ್ಜನ್ಯ ಹಾಗೂ ಸಮುದಾಯದ ಆರಾಧನಾಲಯಗಳ ಮೇಲೆ ನಡೆಯುತ್ತಿರುವ ದಾಳಿ ಹಾಗೂ ಇಲಾಖೆ ತೆಗೆದುಕೊಂಡಿರುವ ಕ್ರಮಗಳ ಕುರಿತು ಚರ್ಚಿಸಲು ಮುಸ್ಲಿಮ್ ಸಂಘಟನೆಗಳ ಒಕ್ಕೂಟದ ವೇದಿಕೆಯಾದ ಮುಸ್ಲಿಮ್ ಮುತ್ತಹಿದಾ ಮಹಾಝ್ ನ ನಿಯೋಗವು ಇಂದು ರಾಜ್ಯ ಪೊಲೀಸ್ ಮಹಾ ನಿರ್ದೇಶಕ ಪ್ರವೀಣ ಸೂದ್ ಅವರನ್ನು ಭೇಟಿಯಾಯಿತು.

ಗದಗ ಜಿಲ್ಲೆಯ ನರಗುಂದ ಘಟನೆ ಮತ್ತು ಬೆಂಗಳೂರು ರೈಲ್ವೇ ನಿಲ್ದಾಣದಲ್ಲಿರುವ ಮಸೀದಿ ದಾಳಿಯ ಕುರಿತು ಡಿ.ಜಿ.ಪಿಯವರ ಗಮನಸೆಳೆದ ನಿಯೋಗವು ತಮ್ಮ ಕಳವಳವನ್ನು ವ್ಯಕ್ತಪಡಿಸಿತು.

ನಿಯೋಗದೊಂದಿಗೆ ಸಕರಾತ್ಮಕವಾಗಿ ಸ್ಪಂದಿಸಿದ ಡಿಜಿಪಿ, ನರಗುಂದ ಹಾಗೂ ಮಸೀದಿ ದಾಳಿ  ಘಟನೆಯ ಕುರಿತು ತಮ್ಮ ವಿಷಾದವನ್ನು ವ್ಯಕ್ತಪಡಿಸಿದರು. ಸಮಾಜ ವಿರೋಧಿ ಶಕ್ತಿಗಳ ವಿರುದ್ಧ ಸೂಕ್ತ ಕಾನೂನು ಕ್ರಮ ಹಾಗೂ ಮುಂದೆ ಇಂತಹ ಕೃತ್ಯ ನಡೆಯದಂತೆ  ಕ್ರಮ ಕೈಗೊಳ್ಳುವುದಾಗಿ ಭರವಸೆ ನೀಡಿದ್ದಾರೆ.

ಜಮಾಅತೆ ಇಸ್ಲಾಮೀ ಹಿಂದ್ ರಾಜ್ಯಾಧ್ಯಕ್ಷ ಡಾ.ಬೆಳಗಾಮಿ ಮುಹಮ್ಮದ್ ಸಾದ್ ನೇತೃತ್ವದ ನಿಯೋಗದಲ್ಲಿ ವಿಧಾನ ಪರಿಷತ್ ಸದಸ್ಯ ನಸೀರ್ ಅಹ್ಮದ್, ಹಿರಿಯ ಮುಸ್ಲಿಂ ಮುಖಂಡ ಜಿ.ಎ.ಬಾವಾ, ಜಮಾಅತ್ ಕಾರ್ಯದರ್ಶಿ ಅಕ್ಬರ್ ಅಲಿ ಉಡುಪಿ, ಮಹಾಝ್ ಕಾರ್ಯದರ್ಶಿ ಮುಹಮ್ಮದ್ ಇಕ್ಬಾಲ್, ಎಪಿಸಿಆರ್ ಕಾರ್ಯದರ್ಶಿ ಅಡ್ವೊಕೇಟ್ ನಿಯಾಝ್, ಎಸ್ಐಓ ಕಾರ್ಯದರ್ಶಿಗಳಾದ ಅಬ್ದುಲ್ ಹಸೀಬ್ ಹಾಗೂ ನಾಸಿರ್ ಉಡುಪಿ ಮತ್ತು ಜಮೀಯ್ಯತುಲ್ ಉಲಮಾದ ತಫ್ಹೀಮ್ ಮಹ್ರೂಫ್ ಉಪಸ್ಥಿತರಿದ್ದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News