ಹಿರಿಯ ಪೋಷಕ ನಟ ಅಶೋಕ್ ರಾವ್ ನಿಧನ

Update: 2022-02-02 17:17 GMT

ಬೆಂಗಳೂರು, ಫೆ.2: ಹಲವು ದಿನಗಳಿಂದ ಕ್ಯಾನ್ಸರ್ ಕಾಯಿಲೆಯಿಂದ ಬಳಲುತಿದ್ದ ಕನ್ನಡ ಚಿತ್ರರಂಗದ ಹಿರಿಯ ನಟ ಅಶೋಕ್ ರಾವ್ ಚಿಕಿತ್ಸೆ ಫಲಿಸದೆ ಬುಧವಾರದಂದು ನಿಧನರಾದರು. 

ವಿದ್ಯಾರಣ್ಯಪುರದ ನಿವಾಸದಲ್ಲಿ ಪಾರ್ಥಿವ ಶರೀರವನ್ನು ಅಂತಿಮ ದರ್ಶನಕ್ಕೆ ಇಡಲಾಗಿತ್ತು. ಮದ್ಯಾಹ್ನ 2.30ಕ್ಕೆ ಹೆಬ್ಬಾಳದಲ್ಲಿ ಅವರ ಅಂತ್ಯಕ್ರಿಯೆ ನೆರವೇರಿಸಲಾಯಿತು.  

ಅಶೋಕ್ ರಾವ್ ಖಳನಾಯಕನಾಗಿ ಡಾ. ರಾಜ್‌ಕುಮಾರ್ ಅಭಿನಯದ ಪರಶುರಾಮ್ ಚಲನಚಿತ್ರದ ಮೂಲಕ ಕನ್ನಡ ಚಿತ್ರರಂಗಕ್ಕೆ ಪದಾರ್ಪಣೆ ಮಾಡಿ, ಅಂಕುಶ, ಸರ್ಕಸ್, ಬಾನಲ್ಲೆ ಮಧುಚಂದ್ರಕೆ ಸಿನಿಮಾ ಸೇರಿದಂತೆ 300ಕ್ಕೂ ಹೆಚ್ಚು ಚಿತ್ರಗಳಲ್ಲಿ ಅವರು ನಟಿಸಿದ್ದಾರೆ. ಅಶೋಕ್ ರಾವ್ ಅಗಲಿಕೆಗೆ ಕನ್ನಡ ಚಿತ್ರರಂಗದ ನಟ, ನಟಿಯರು ಸೇರಿದಂತೆ ಗಣ್ಯರು ಸಂತಾಪ ವ್ಯಕ್ತಪಡಿಸಿದರು. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News