ಫೆ.5: ಪದ್ಮಶ್ರೀ ಮಹಾಲಿಂಗ ನಾಯ್ಕರಿಗೆ ಸನ್ಮಾನ
Update: 2022-02-04 22:04 IST
ಮಂಗಳೂರು : ಪದ್ಮಶ್ರೀ ಪ್ರಶಸ್ತಿಗೆ ಭಾಜನರಾದ ಮಹಾಲಿಂಗ ನಾಯ್ಕರಿಗೆ ದ.ಕ. ಜಿಲ್ಲಾಡಳಿತ, ದ.ಕ.ಜಿಪಂ ಹಾಗೂ ಕನ್ನಡ ಮತ್ತು ಸಂಸಕ್ಕತಿ ಇಲಾಖೆಯ ಸಂಯುಕ್ತಾಶ್ರಯದಲ್ಲಿ ಫೆ.5ರ ಬೆಳಗ್ಗೆ 10:30ಕ್ಕೆ ನಗರದ ಕೋಡಿಯಾಲ್ ಬೈಲ್ನ ಶಾರದಾ ವಿದ್ಯಾಲಯದಲ್ಲಿ ಸನ್ಮಾನ ಕಾರ್ಯಕ್ರಮವನ್ನು ಆಯೋಜಿಸಲಾಗಿದೆ.
ದ.ಕ.ಜಿಲ್ಲಾ ಉಸ್ತುವಾರಿ ಸಚಿವ ಸುನೀಲ್ ಕುಮಾರ್ ಸನ್ಮಾನಿಸಲಿದ್ದಾರೆ. ಸಂಸದ ನಳಿನ್ ಕುಮಾರ್ ಕಟೀಲ್ ಕಾರ್ಯಕ್ರಮ ಉದ್ಘಾಟಿಸಲಿದ್ದಾರೆ.ಶಾಸಕ ವೇದವ್ಯಾಸ ಕಾಮತ್ ಸಭೆಯ ಅಧ್ಯಕ್ಷತೆ ವಹಿಸಲಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.