×
Ad

ಬೆಂಗಳೂರು: 100 ರೂ. ಲಂಚ ಕೇಳಿದ ಆರೋಪ; ಕಾನ್‍ಸ್ಟೇಬಲ್ ಅಮಾನತು

Update: 2022-02-05 19:38 IST

ಬೆಂಗಳೂರು, ಫೆ.5: ಅರ್ಧ ಹೆಲ್ಮೆಟ್ ಹಾಕಿದ್ದ ಬೈಕ್ ಸವಾರನಿಂದ ಸಂಚಾರ ಪೊಲೀಸ್ ಕಾನ್‍ಸ್ಟೇಬಲ್ 100 ರೂ., ಲಂಚ ಕೇಳಿದ ಆರೋಪದಡಿ ಅವರನ್ನು ಅಮಾನತು ಮಾಡಲಾಗಿದೆ.

ಲಂಚ ಪಡೆದ ವಿಡಿಯೊ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿತ್ತು. ಈ ಹಿನ್ನೆಲೆಯಲ್ಲಿ ಸಂಚಾರ ಪೊಲೀಸ್ ವಿಭಾಗದ ಜಂಟಿ ಆಯುಕ್ತ ಡಾ.ಬಿ.ಆರ್.ರವಿಕಾಂತೇಗೌಡ, ಕಾನ್‍ಸ್ಟೇಬಲ್‍ರನ್ನು ಅಮಾನತುಗೊಳಿಸಿ ಆದೇಶ ಹೊರಡಿಸಿದ್ದಾರೆ.

ಎಚ್‍ಎಎಲ್ ಸಂಚಾರ ಪೊಲೀಸ್ ಠಾಣೆಯ ಕಾನ್‍ಸ್ಟೇಬಲ್ ಪವನ್ ದ್ಯಾಮಣ್ಣ ಎಂಬುವರು ಅಮಾನತು ಆಗಿದ್ದು, ಅರ್ಧ ಹೆಲ್ಮೆಟ್ ಹಾಕಿಕೊಂಡು ಬಂದ ಬೈಕ್ ಸವಾರನಿಂದ 100 ರೂ. ಲಂಚ ಪಡೆದು ಬಿಟ್ಟು ಕಳುಹಿಸಿದ ವಿಡಿಯೊ ವೈರಲ್ ಆಗಿತ್ತು. 

ಪ್ರಾಥಮಿಕ ತನಿಖೆಯಲ್ಲಿ ಆರೋಪ ನಿಜ ಎಂದು ಕಂಡು ಬಂದಿರುವುದರಿಂದ ಅಮಾನತು ಮಾಡಿ ಆದೇಶ ಹೊರಡಿಸಲಾಗಿದೆ ಎಂದು ರವಿಕಾಂತೇಗೌಡ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News