ಪಡುಪೆರಾರ ಗ್ರಾಪಂನಿಂದ ಸ್ವಚ್ಛತಾ ಅಭಿಯಾನ
Update: 2022-02-06 19:40 IST
ಮಂಗಳೂರು : ಪಡುಪೆರಾರ ಗ್ರಾಪಂ ವ್ಯಾಪ್ತಿಯ ಕಜೆಪದವುನಿಂದ ಬಜ್ಪೆಯತ್ತ ಸುಮಾರು ಎರಡು ಕಿಮೀ ರಸ್ತೆಯ ಎರಡೂ ಪಾರ್ಶ್ವದಲ್ಲಿ ರಾಶಿ ಬಿದ್ದಿದ್ದ ಲೋಡ್ಗಟ್ಟೆಲೆ ತ್ಯಾಜ್ಯವನ್ನು ಪಂಚಾಯತ್ ವತಿಯಿಂದ ಸ್ಥಳೀಯ ಸಂಘ-ಸಂಸ್ಥೆಗಳ ಸದಸ್ಯರು ಹಾಗೂ ಗ್ರಾಮಸ್ಥರು ರವಿವಾರ ಸ್ವಚ್ಛಗೊಳಿಸಲಾಯಿತು.
ಗ್ರಾಪಂ ಅಧ್ಯಕ್ಷೆ ಅಮಿತಾ ಶೆಟ್ಟಿ, ಪಿಡಿಒ ಉಗ್ಗಪ್ಪ ಮೂಲ್ಯ ನೇತೃತ್ವದಲ್ಲಿ ನಡೆದ ‘ಸ್ವಚ್ಛತಾ ಅಭಿಯಾನ’ದಲ್ಲಿ ಗ್ರಾಪಂ ಸದಸ್ಯ ಅರುಣ್ ಕೋಟ್ಯಾನ್, ಕ್ಲಬ್ನ ಅಧ್ಯಕ್ಷ ಹರೀಶ್, ಉಪಾಧ್ಯಕ್ಷ ಕುಮಾರ್, ಕಾರ್ಯದರ್ಶಿ ಮೋಹನ್ ಮತ್ತಿತರರು ಭಾಗವಹಿಸಿದ್ದರು.