ಲತಾ ಮಂಗೇಶ್ಕರ್ ನಿಧನ: ರಾಜ್ಯದಲ್ಲಿ ಎರಡು ದಿನ ಶೋಕಾಚಾರಣೆ

Update: 2022-02-06 14:22 GMT

ಬೆಂಗಳೂರು, ಫೆ. 6: `ಭಾರತ ರತ್ನ, ಗಾಯಕಿ ಲತಾ ಮಂಗೇಶ್ವರ್ ನಿಧನದ ಹಿನ್ನೆಲೆಯಲ್ಲಿ ಅವರ ಗೌರವಾರ್ಥವಾಗಿ ರಾಜ್ಯದಲ್ಲಿ ಫೆ.6 ಹಾಗೂ 7ರಂದು ಎರಡು ದಿನಗಳ ಕಾಲ ಶೋಕವನ್ನು ಆಚರಿಸಲಾಗುವುದು' ಎಂದು ರಾಜ್ಯ ಸರಕಾರ ಪ್ರಕಟಿಸಿದೆ.

ಈ ಅವಧಿಯಲ್ಲಿ ಯಾವುದೇ ಅಧಿಕೃತ ಸಾರ್ವಜನಿಕ ಯಾವುದೇ ಮನರಂಜನಾ ಕಾರ್ಯಕ್ರಮಗಳು ಇರುವುದಿಲ್ಲ ಹಾಗೂ ನಿಯತವಾಗಿ ರಾಷ್ಟ್ರ ಧ್ವಜವನ್ನು ಹಾರಿಸಲ್ಪಡುವ ಸರಕಾರದ ಎಲ್ಲ ಕಟ್ಟಡಗಳ ಮೇಲೆ ರಾಷ್ಟ್ರಧ್ವಜವನ್ನು ಅರ್ಧ ಮಟ್ಟದಲ್ಲಿ ಹಾರಿಸಲಾಗುವುದು ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ(ಶಿಷ್ಟಾಚಾರ)ಯ ಸರಕಾರದ ಅಧೀನ ಕಾರ್ಯದರ್ಶಿ ಅಧಿಸೂಚನೆ ಹೊರಡಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News