ಶಿವಮೊಗ್ಗ: ಕಾಲೇಜು ಆವರಣದಲ್ಲಿ ಕಲ್ಲು ತೂರಾಟ, ನಗರ ವ್ಯಾಪ್ತಿಯಲ್ಲಿ 144 ಸೆಕ್ಷನ್ ಜಾರಿ
Update: 2022-02-08 14:01 IST
ಶಿವಮೊಗ್ಗ: ಸರ್ಕಾರಿ ಪದವಿ ಕಾಲೇಜು ಸೇರಿದಂತೆ ವಿವಿಧ ಕಾಲೇಜುಗಳಲ್ಲಿ ಸ್ಕಾರ್ಫ್ - ಕೇಸರಿ ಶಾಲು ವಿಚಾರಕ್ಕೆ ಸಂಬಂಧಿಸಿ ನಗರದ ಪ್ರಥಮ ದರ್ಜೆ ಕಾಲೇಜಿನ ಮೇಲೆ ವಿದ್ಯಾರ್ಥಿಗಳು ಕಲ್ಲು ತೂರಾಟ ನಡೆಸಿದ್ದು, ಪರಿಸ್ಥಿತಿ ಹತೋಟಿಗೆ ತಹಶೀಲ್ದಾರ್ ಸೆಕ್ಷನ್ 144 ಜಾರಿಮಾಡಿದ್ದಾರೆ.
ಪರಿಸ್ಥಿತಿ ವಿಕೋಪಕ್ಕೆ ಹೋದ ಹಿನ್ನೆಲೆಯಲ್ಲಿ ಶಿವಮೊಗ್ಗ ನಗರದಲ್ಲಿ ಫೆ.8 ಮತ್ತು 9 ರಂದು 144 ಸೆಕ್ಷನ್ ಜಾರಿಗೊಳಿಸಿ ತಹಶೀಲ್ದಾರ್ ಆದೇಶ ಹೊರಡಿಸಿದ್ದಾರೆ.