ಟಿಪ್ಪು ಎಕ್ಸ್‌ಪ್ರೆಸ್‌ ಬದಲಿಗೆ 'ಒಡೆಯರ್ ಎಕ್ಸ್‌ಪ್ರೆಸ್‌' ಎಂದು ಮರುನಾಮಕರಣ ಮಾಡಲು ಸಂಸದ ಪ್ರತಾಪ್ ಸಿಂಹ ಮನವಿ

Update: 2022-02-11 14:53 GMT

ಮೈಸೂರು:  ಟಿಪ್ಪು ಎಕ್ಸ್​ಪ್ರೆಸ್ ಬದಲಿಗೆ ಒಡೆಯರ್ ಎಕ್ಸ್‌ಪ್ರೆಸ್‌ ರೈಲು ಎಂದು ಹೆಸರಿಡುವಂತೆ ಮನವಿ ಕೊಡಗು- ಮೈಸೂರು ಸಂಸದ ಪ್ರತಾಪ್ ಸಿಂಹ ಮನವಿ ಮನವಿ ಮಾಡಿದ್ದಾರೆ. 

ಈ ಸಂಬಂಧ ರೈಲ್ವೇ ಸಚಿವ ಅಶ್ವಿನಿ‌ ವೈಷ್ಣವ್‌ ಅವರನ್ನು ಶುಕ್ರವಾರ ದೆಹಲಿಯಲ್ಲಿ ಭೇಟಿಯಾಗಿ ಮೈಸೂರಿಗೆ ರೈಲು ಸೇವೆ ಕಲ್ಪಿಸುವಲ್ಲಿ ಮಹಾರಾಜರ ಕೊಡುಗೆ ಬಹಳಷ್ಟು ಇದೆ. ಹೀಗಾಗಿ ಒಡೆಯರ್ ಎಕ್ಸ್‌ಪ್ರೆಸ್‌ ಎಂದು ಹೆಸರಿಡುವಂತೆ ಲಿಖಿತ ರೂಪದಲ್ಲಿ ಮನವಿ ಸಲ್ಲಿಸಿದ್ದಾರೆ.

ಈ  ಹಿಂದೆ  ನಾಗರಹೊಳೆ ರಾಷ್ಟ್ರೀಯ ಅಭಯಾರಣ್ಯಕ್ಕೆ ಫೀಲ್ಡ್ ಮಾರ್ಷಲ್ ಕಾರ್ಯಪ್ಪ ಹೆಸರಿಡುವಂತೆ ಮೈಸೂರು-ಕೊಡಗು ಸಂಸದ ಪ್ರತಾಪ್ ಸಿಂಹ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರಿಗೆ ಪತ್ರ ಬರೆದಿದ್ದರು.

Full View

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News