ರಾಹುಲ್ ಗಾಂಧಿಯೊಂದಿಗೆ ಭಿನ್ನಾಭಿಪ್ರಾಯವಿದೆ ಎಂಬ ಬಿಜೆಪಿಯ ಆರೋಪಕ್ಕೆ ಪ್ರಿಯಾಂಕಾ ಪ್ರತಿಕ್ರಿಯಿಸಿದ್ದು ಹೀಗೆ

Update: 2022-02-13 09:39 GMT

ಹೊಸದಿಲ್ಲಿ: "ನಾನು ನನ್ನ ಸಹೋದರನಿಗಾಗಿ ನನ್ನ ಪ್ರಾಣವನ್ನು ನೀಡಬಲ್ಲೆ ಹಾಗೂ ಅವನು ನನಗಾಗಿ ತನ್ನ ಪ್ರಾಣವನ್ನು ನೀಡಬಲ್ಲನು" ಎಂದು ಕಾಂಗ್ರೆಸ್ ನಾಯಕಿ ಪ್ರಿಯಾಂಕಾ ಗಾಂಧಿ ವಾದ್ರಾ ಅವರು ಇಂದು ಬಿಜೆಪಿ ಆರೋಪಕ್ಕೆ ಪ್ರತಿಕ್ರಿಯಿಸಿದ್ದಾರೆ.

ಪ್ರಿಯಾಂಕಾ  ಹಾಗೂ  ರಾಹುಲ್ ಗಾಂಧಿ ನಡುವಿನ ಭಿನ್ನಾಭಿಪ್ರಾಯವು ಕಾಂಗ್ರೆಸ್ ಪಕ್ಷವನ್ನು ಉರುಳಿಸಲಿದೆ ಎಂದು ಉತ್ತರ ಪ್ರದೇಶದ ಮುಖ್ಯಮಂತ್ರಿ ಆದಿತ್ಯನಾಥ್ ಹೇಳಿದ್ದಾರೆ ಎಂಬ ವರದಿಗಳಿಗೆ ಪ್ರತಿಕ್ರಿಯಿಸಿದ ಅವರು, "ಸಂಘರ್ಷ ಎಲ್ಲಿದೆ" ಎಂದು ಕೇಳಿದರು.

"ಸಂಘರ್ಷ ಯೋಗಿಜಿ ಅವರ ಮನಸ್ಸಿನಲ್ಲಿದೆ.  ಪ್ರಧಾನಿ ಮೋದಿಜಿ, ಕೇಂದ್ರ ಗೃಹ ಸಚಿವ ಅಮಿತ್ ಶಾ ಜೀ  ನಡುವೆ ತಾವು  ಹೊಂದಿರುವ  ಭಿನ್ನಾಭಿಪ್ರಾಯದಿಂದಾಗಿ ಅವರು ಈ ರೀತಿ ಹೇಳುತ್ತಿದ್ದಾರೆಂದು ತೋರುತ್ತದೆ" ಎಂದರು.

ಉತ್ತರ ಪ್ರದೇಶದ ಉಸ್ತುವಾರಿ, ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ  ಅವರು ರಾಜಕೀಯವಾಗಿ ಮಹತ್ವದ ರಾಜ್ಯದಲ್ಲಿ ಪಕ್ಷದ ಚುನಾವಣಾ ಪ್ರಚಾರದಲ್ಲಿ ಮುಂಚೂಣಿಯಲ್ಲಿದ್ದಾರೆ.

ರಾಜಕೀಯ ರ್ಯಾಲಿಗಳಿಂದ ಹಿಡಿದು ‘ಲಡ್ಕಿ ಹೂಂ ಲಡ್ ಸಕ್ತಿ ಹೂಂ’ ಎಂಬ ಪ್ರಚಾರದವರೆಗೆ ಕಾಂಗ್ರೆಸ್ ನಾಯಕಿ ತನ್ನ ಪಕ್ಷದ ಪ್ರಚಾರವನ್ನು ಮುನ್ನಡೆಸುತ್ತಿದ್ದಾರೆ.  

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News