ಚಾಮರಾಜನಗರ: ನೌಕರಿ ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ
Update: 2022-02-13 13:20 GMT
ಚಾಮರಾಜನಗರ: ನೌಕರಿ ಸಿಗದಿದ್ದಕ್ಕೆ ಜಿಗುಪ್ಸೆಗೊಂಡು ಯುವಕನೋರ್ವ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದಲ್ಲಿ ನಡೆದಿದೆ.
ಚಾಮರಾಜನಗರ ತಾಲೂಕಿನ ಜ್ಯೋತಿಗೌಡನಪುರ ಗ್ರಾಮದ ಮನು (22) ಎಂಬಾತ ಮೃತ ಯುವಕ ಎಂದು ಎಂದು ತಿಳಿದು ಬಂದಿದೆ.
ಈತ ಇತ್ತೀಚೆಗೆ ವಿದ್ಯಾಭ್ಯಾಸ ಮುಗಿಸಿದ್ದು, ಯಾವುದೇ ನೌಕರಿ ಸಿಗದಿದ್ದರಿಂದ ಖಿನ್ನತೆಗೊಳಗಾಗಿದ್ದ ಎನ್ನಲಾಗಿದೆ. ಯುವಕ ಮನೆಯಲ್ಲಿ ಯಾರೂ ಇಲ್ಲದ ವೇಳೆ, ಕ್ರಿಮಿನಾಶಕ ಸೇವಿಸಿದ್ದಾನೆ. ತಕ್ಷಣವೇ ಆಸ್ಪತ್ರೆಗೆ ಸೇರಿಸಲಾದರೂ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾನೆ ಎಂದು ತಿಳಿದು ಬಂದಿದೆ.
ಈ ಸಂಬಂಧ ಚಾಮರಾಜನಗರ ಪೂರ್ವ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ವಾರಸುದಾರರಿಗೆ ನೀಡಲಾಗಿದೆ.