ಸರಕಾರಿ ಜಮೀನು ಒತ್ತುವರಿ ಕಂಡಲ್ಲಿ ದೂರು ನೀಡಲು ಸೂಚನೆ
Update: 2022-02-16 20:28 IST
ಉಡುಪಿ, ಫೆ.16: ಜಿಲ್ಲೆಯಲ್ಲಿ ಸರಕಾರಿ ಜಮೀನು, ಕೆರೆ, ಕಟ್ಟೆ, ಕುಂಟೆ, ಹಳ್ಳ, ಸರೋವರ ಮತ್ತು ಇನ್ನಿತರ ಜಲಕಾಯ/ ಜಲಮೂಲಗಳೆಂದು ವರ್ಗೀಕೃತವಾದ ಜಮೀನುಗಳನ್ನು ಗ್ರಾಮ ನಕಾಶೆಯಲ್ಲಿ ರಸ್ತೆ, ಬೀದಿ, ಬಂಡಿದಾರಿ, ಓಣಿ ಅಥವಾ ಹಾದಿ ಎಂದು ನಮೂದಾಗಿರುವ ಇತರೆ ಎಲ್ಲಾ ಸರ್ಕಾರಿ ಜಮೀನುಗಳು ಒತ್ತುವರಿಯಾಗಿದ್ದಲ್ಲಿ ಸಾರ್ವಜನಿಕರು ಜಿಲ್ಲಾಧಿಕಾರಿ ಗಳಿಗೆ ಅಥವಾ ಸಂಬಂಧಪಟ್ಟ ತಹಶೀಲ್ದಾರಿಗೆ ದೂರು ನೀಡುವಂತೆ ಉಡುಪಿ ತಹಶೀಲ್ದಾರ್ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.