ಶಾಲಾ-ಕಾಲೇಜಲ್ಲಿ ಹಿಂದೆ ಹೇಗಿತ್ತೋ ಹಾಗೆ ಡ್ರೆಸ್ ಕೋಡ್ ಮುಂದುವರಿಯಲಿ: ಧ್ರುವನಾರಾಯಣ
Update: 2022-02-19 15:14 IST
ಚಿಕ್ಕಮಗಳೂರು, ಫೆ.19: ಸರಕಾರದ ಲೋಪ-ದೋಷಗಳನ್ನ ಮುಚ್ಚಿಹಾಕಲು ಹಿಜಾಬ್ ವಿವಾದ ಸೃಷ್ಟಿಸಲಾಗಿದೆ. ಶಾಲಾ-ಕಾಲೇಜುಗಳಲ್ಲಿ ಹಿಂದೆ ಹೇಗಿತ್ತೋ ಹಾಗೆ ಡ್ರೆಸ್ ಕೋಡ್ ಮುಂದುವರಿಯಲಿ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಧ್ರುವನಾರಾಯಣ ಹೇಳಿದ್ದಾರೆ.
ನಗರದಲ್ಲಿಂದು ಮಾಧ್ಯಮದವರೊಂದಿಗೆ ಮಾತನಾಡಿದ ಅವರು, ರಾಜ್ಯದಲ್ಲಿ ಕಾಂಗ್ರೆಸ್ ಪರವಾದ ಅಲೆಯಿದೆ. ಅದನ್ನು ನೋಡಿ ಬಿಜೆಪಿ ತನ್ನ ಆಡಳಿತದ ವೈಫಲ್ಯ ಮರೆಮಾಚಲು ಭಾವನಾತ್ಮಕ ವಿಚಾರ ಎಳೆದು ತಂದಿದೆ ಎಂದು ಆರೋಪಿಸಿದರು.
ಜೆಡಿಎಸ್ ಜಾತ್ಯತೀತ ಪಕ್ಷ ಅಂತ ಅವರಿಗೆ ಬೆಂಬಲ ಕೊಟ್ಟಿದ್ದೇವು. ಆದರೆ ಕುಮಾರಸ್ವಾಮಿ ತಮ್ಮ ಅವಕಾಶವಾದಿ ತನವನ್ನ ಪ್ರದರ್ಶಿಸಿದರು. ಐದು ವರ್ಷ ಅವರೇ ಮುಖ್ಯಮಂತ್ರಿ ಆಗಬಹುದಿತ್ತು. ಆದರೆ ಅವರು ಸಿಕ್ಕ ಅವಕಾಶವನ್ನು ಉಪಯೋಗಿಸಿಕೊಳ್ಳಲಿಲ್ಲ. ಶಾಸಕರ ವಿಶ್ವಾಸ ಗಳಿಸದೆ, ಸರಿಯಾಗ ಆಡಳಿತ ಮಾಡದೆ ಅಧಿಕಾರ ಕಳೆದುಕೊಂಡರು.
ಈಗ ಎಲ್ಲಾ ಕಳೆದುಕೊಂಡು ಹತಾಶರಾಗಿ ಮಾತನಾಡುತ್ತಿದ್ದಾರೆ ಎಂದರು.