ಚುನಾವಣೆ ಸಂಹಿತೆ ಉಲ್ಲಂಘನೆ: ಅರವಿಂದ ಕೇಜ್ರಿವಾಲ್, ಆಪ್ ವಿರುದ್ಧ ಎಫ್ಐಆರ್ ದಾಖಲಿಸಲು ಸೂಚನೆ

Update: 2022-02-19 18:31 GMT

ಚಂಡಿಗಡ, ಫೆ. 19: ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ ಹಾಗೂ ಇತರ ರಾಜಕೀಯ ಪಕ್ಷಗಳ ವಿರುದ್ಧ ಸುಳ್ಳು, ಕ್ಷುಲ್ಲಕ ಆರೋಪ ಮಾಡಿದ ಆಪ್ ವರಿಷ್ಠ ಅರವಿಂದ ಕೇಜ್ರಿವಾಲ್ ಹಾಗೂ ಅವರ ಪಕ್ಷದ ವಿರುದ್ಧ ಎಫ್ಐಆರ್ ದಾಖಲಿಸುವಂತೆ ರಾಜ್ಯ ಮುಖ್ಯ ಚುನಾವಣಾ ಅಧಿಕಾರಿ (ಸಿಇಒ) ಜಿಲ್ಲಾ ಚುನಾವಣಾ ಅಧಿಕಾರಿ-ಮೋಹಾಲಿ ಜಿಲ್ಲಾ ಆಯುಕ್ತ ಹಾಗೂ ಎಸ್ಎಸ್ಪಿಗೆ ಸೂಚಿಸಿದ್ದಾರೆ.

ಶಿರೋಮಣಿ ಅಕಾಲಿ ದಳ (ಎಸ್ಎಡಿ) ದ ಉಪಾಧ್ಯಕ್ಷ ಹಾಗೂ ವಕ್ತಾರ ಅರ್ಶದೀಪ್ ಸಿಂಗ್ ಕ್ಲೇರ್ ಅವರು ನೀಡಿದ ದೂರಿನ ಹಿನ್ನೆಲೆಯಲ್ಲಿ ಈ ನಿರ್ದೇಶನ ನೀಡಲಾಗಿದೆ. ಪಂಜಾಬ್ ನ ಆಪ್ ಫೇಸ್ಬುಕ್ ಹಾಗೂ ಟ್ವಿಟರ್ನಂತಹ ಸಾಮಾಜಿಕ ಮಾಧ್ಯಮದಲ್ಲಿ ಅಪ್ಲೋಡ್ ಮಾಡಿದ ವೀಡಿಯೊ ಕುರಿತು ಆಕ್ಷೇಪ ವ್ಯಕ್ತಪಡಿಸಿ ಅವರು ಈ ದೂರು ಸಲ್ಲಿಸಿದ್ದಾರೆ. ಈ ವೀಡಿಯೊ ಎಸ್ಎಡಿ ಹಾಗೂ ಇತರ ರಾಜಕೀಯ ಪಕ್ಷಗಳ ವರ್ಚಸ್ಸಿಗೆ ಧಕ್ಕೆ ಉಂಟು ಮಾಡಿದೆ ಎಂದು ಅವರು ಆರೋಪಿಸಿದ್ದಾೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News