ಪಶ್ಚಿಮ ಬಂಗಾಳದ ಸಚಿವ ಸಾಧನ ಪಾಂಡೆ ನಿಧನ

Update: 2022-02-20 17:44 GMT
ಸಾಧನ ಪಾಂಡೆ

ಕೋಲ್ಕತಾ,ಫೆ.21: ಪ.ಬಂಗಾಳದ ಸಚಿವ ಹಾಗೂ ಟಿಎಂಸಿಯ ಹಿರಿಯ ನಾಯಕ ಸಾಧನ ಪಾಂಡೆ (71) ಅವರು ರವಿವಾರ ಬೆಳಿಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಕಳೆದ ವರ್ಷ ತೀವ್ರ ಶ್ವಾಸಕೋಶ ಸೋಂಕಿನಿಂದ ಬಳಲುತ್ತಿದ್ದ ಪಾಂಡೆಯವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಅವರ ಸ್ಥಿತಿ ತೀರ ಹದಗೆಟ್ಟಿದ್ದ ಹಿನ್ನೆಲೆಯಲ್ಲಿ ಹೆಚ್ಚಿನ ಚಿಕಿತ್ಸೆಗಾಗಿ ಮಂಬೈನ ಆಸ್ಪತ್ರೆಗೆ ಸ್ಥಳಾಂತರಿಸಲಾಗಿತ್ತು. ಅವರು ವೆಂಟಿಲೇಟರ್ನಲ್ಲಿದ್ದರು ಎಂದು ಕುಟುಂಬ ಸದಸ್ಯರು ತಿಳಿಸಿದ್ದಾರೆ.

ಪಾಂಡೆ ನಿಧನಕ್ಕೆ ಸಂತಾಪಗಳನ್ನು ವ್ಯಕ್ತಪಡಿಸಿರುವ ಪ.ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿಯವರು,‘ನಮ್ಮ ಹಿರಿಯ ಸಹೋದ್ಯೋಗಿ,ಪಕ್ಷದ ನಾಯಕ ಹಾಗೂ ಸಚಿವ ಸಾಧನ ಪಾಂಡೆ ರವಿವಾರ ಬೆಳಿಗ್ಗೆ ಮುಂಬೈನಲ್ಲಿ ನಿಧನರಾಗಿದ್ದಾರೆ. ಅವರೊಂದಿಗೆ ಸುದೀರ್ಘ ಕಾಲ ಉತ್ತಮ ಬಾಂಧವ್ಯವಿತ್ತು. ಅವರ ನಿಧನದಿಂದ ತೀವ್ರ ನೋವಾಗಿದೆ. ಅವರ ಕುಟುಂಬಕ್ಕೆ,ಸ್ನೇಹಿತರು ಮತ್ತು ಅನುಯಾಯಿಗಳಿಗೆ ನನ್ನ ಹೃತ್ಪೂರ್ವಕ ಸಂತಾಪಗಳು ’ಎಂದು ಟ್ವೀಟಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News