ಶಿವಮೊಗ್ಗದಲ್ಲಿ ಬಜರಂಗದಳ ಕಾರ್ಯಕರ್ತನ ಹತ್ಯೆ ಪ್ರಕರಣ: ಇಬ್ಬರು ಆರೋಪಿಗಳ ಬಂಧನ

Update: 2022-02-21 15:27 GMT

ಶಿವಮೊಗ್ಗ: ಬಜರಂಗದಳದ ಕಾರ್ಯಕರ್ತ ಹರ್ಷ ಕೊಲೆ ಪ್ರಕಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. 

ಈ ಕುರಿತು ಎಡಿಜಿಪಿ ಮುರುಗನ್ ಮಾಹಿತಿ ನೀಡಿದ್ದಾರೆ. 

ಬಂಧಿತ ಆರೋಪಿಗಳನ್ನು ಬುದ್ದನಗರ ನಿವಾಸಿ ಖಾಸಿಫ್(30), ಜೆಪಿ ನಗರ ನಿವಾಸಿ ಸಯ್ಯದ್ ನದೀಂ( 20) ಎಂದು ಗುರುತಿಸಲಾಗಿದೆ. 

ರವಿವಾರ ರಾತ್ರಿ ಶಿವಮೊಗ್ಗ ನಗರದ ಕಾಮತ್ ಪೆಟ್ರೋಲ್ ಬಂಕ್ ಸಮೀಪದ ಭಾರತಿ ಕಾಲೋನಿ ಬಳಿ ದುಷ್ಕರ್ಮಿಗಳು ಮಾರಕಾಸ್ತ್ರಗಳಿಂದ ಹಲ್ಲೆ ನಡೆಸಿ ಕೊಲೆ ಮಾಡಿದ್ದರು.

ಈ ಸಂಬಂಧ ಮೃತ ಯುವಕನ ತಾಯಿಯ ದೂರಿನ ಮೇರೆಗೆ ದೊಡ್ಡಪೇಟೆ ಠಾಣೆಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಘಟನೆ ನಡೆದ 24 ಗಂಟೆಯೊಳಗೆ ಪೊಲೀಸರು ಇಬ್ಬರು ಆರೋಪಿಗಳನ್ನು ಬಂಧಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News