ಉಡುಪಿ: ನಿಷೇಧಾಜ್ಞೆ ಮುಂದುವರಿಕೆ
Update: 2022-02-21 18:41 IST
ಉಡುಪಿ, ಫೆ.21: ಜಿಲ್ಲೆಯಲ್ಲಿ ಹಿಜಾಬ್- ಕೇಸರಿ ಶಾಲು ವಿವಾದದ ಹಿನ್ನೆಲೆಯಲ್ಲಿ ಯಾವುದೇ ಅಹಿತಕರ ಘಟನೆಗಳು ನಡೆಯದಂತೆ ಮುಂಜಾಗ್ರತಾ ಕ್ರಮವಾಗಿ ಕಾನೂನು, ಸುವ್ಯವಸ್ಥೆ ಕಾಪಾಡುವ ಹಾಗೂ ಸಾರ್ವಜನಿಕ ಹಿತದೃಷ್ಟಿಯಿಂದ ಜಿಲ್ಲಾ ವ್ಯಾಪ್ತಿಯ ಎಲ್ಲಾ ಪ್ರೌಢಶಾಲೆಗಳ ಸುತ್ತಮುತ್ತ 200 ಮೀ. ವ್ಯಾಪ್ತಿ ಪ್ರದೇಶದಲ್ಲಿ ದಂಡ ಸಂಹಿತೆ 1973ರ ಕಲಂ 144 ಅನ್ವಯ ವಿಧಿಸಲಾಗಿದ್ದ ನಿಷೇಧಾಜ್ಞೆಯನ್ನು ಫೆ.28ರ ಸಂಜೆ 6:00 ಗಂಟೆಯವರೆಗೆ ವಿಸ್ತರಿಸಿ ಜಿಲ್ಲಾಧಿಕಾರಿ ಕೂಮಾರಾರ್ವ್ ಎಂ. ಆದೇಶ ಹೊರಡಿಸಿದ್ದಾರೆ.