×
Ad

ರಾಜ್ಯದಲ್ಲಿಂದು 679 ಮಂದಿಗೆ ಕೊರೋನ ದೃಢ, 21 ಮಂದಿ ಮೃತ್ಯು

Update: 2022-02-21 21:48 IST

ಬೆಂಗಳೂರು, ಫೆ.21: ರಾಜ್ಯದಲ್ಲಿ ಸೋಮವಾರದಂದು 679 ಹೊಸ ಕೊರೋನ ಪ್ರಕರಣಗಳು ದೃಢವಾಗಿವೆ. 21 ಜನರು ಸೋಂಕಿಗೆ ಬಲಿಯಾಗಿದ್ದು, 1932 ಜನರು ಗುಣಮುಖರಾಗಿದ್ದಾರೆ.

ರಾಜ್ಯದಲ್ಲಿ ಈಗಾಗಲೇ ಒಟ್ಟು ಸೋಂಕಿತರ ಸಂಖ್ಯೆ 39,37,265ಕ್ಕೆ ತಲುಪಿದೆ. ಇಲ್ಲಿಯವರೆಗೆ ಒಟ್ಟು ಸಾವಿನ ಸಂಖ್ಯೆ 39,816ಕ್ಕೆ ತಲುಪಿದೆ. 
ಒಟ್ಟು ಸಕ್ರಿಯ ಕೊರೋನ ಪ್ರಕರಣ ಸಂಖ್ಯೆ 11,360ಕ್ಕೆ ಏರಿಕೆಯಾಗಿದ್ದು, ಇವರೆಲ್ಲ ಸೋಂಕಿತರು ಆಸ್ಪತ್ರೆ, ಕೊರೋನ ಕೇರ್ ಸೆಂಟರ್ ಹಾಗೂ ಮನೆಗಳಲ್ಲಿ ಚಿಕಿತ್ಸೆ ಮತ್ತು ಆರೈಕೆಯಲ್ಲಿದ್ದಾರೆ.

21 ಸೋಂಕಿತರು ಬಲಿ: ಬಳ್ಳಾರಿ 4, ಬೆಂಗಳೂರು ನಗರ 8, ದಕ್ಷಿಣ ಕನ್ನಡ 2, ಧಾರವಾಡ 2, ಹಾವೇರಿ 1, ಕಲಬುರಗಿ 1, ಕೊಡಗು 1, ವಿಜಯಪುರ ಜಿಲ್ಲೆಯಲ್ಲಿ ಒಬ್ಬರು ಸಾವನ್ನಪ್ಪಿದ್ದಾರೆ. 

ಎಲ್ಲೆಲ್ಲಿ ಎಷ್ಟು: ರಾಜ್ಯದಲ್ಲಿ ಹೊಸದಾಗಿ 679 ಪ್ರಕರಣಗಳು ದೃಢವಾಗಿದ್ದು, ಅದರಲ್ಲಿ ಬಾಗಲಕೋಟೆ 5, ಬಳ್ಳಾರಿ 31, ಬೆಳಗಾವಿ 11, ಬೆಂಗಳೂರು ಗ್ರಾಮಾಂತರ 4, ಬೆಂಗಳೂರು ನಗರ 346, ಬೀದರ್ 3, ಚಾಮರಾಜನಗರ 9, ಚಿಕ್ಕಬಳ್ಳಾಪುರ 4, ಚಿಕ್ಕಮಗಳೂರು 8, ಚಿತ್ರದುರ್ಗ 16, ದಕ್ಷಿಣ ಕನ್ನಡ 15, ದಾವಣಗೆರೆ 7, ಧಾರವಾಡ 7, ಗದಗ 2, ಹಾಸನ 21, ಹಾವೇರಿ 1, ಕಲಬುರಗಿ 11, ಕೊಡಗು 28, ಕೋಲಾರ 2, ಕೊಪ್ಪಳ 6, ಮಂಡ್ಯ 7, ಮೈಸೂರು 26, ರಾಯಚೂರು 6, ರಾಮನಗರ 12, ಶಿವಮೊಗ್ಗ 34, ತುಮಕೂರು 20, ಉಡುಪಿ 21, ಉತ್ತರ ಕನ್ನಡ 12, ವಿಜಯಪುರ 3, ಯಾದಗಿರಿ ಜಿಲ್ಲೆಯಲ್ಲಿ ಒಂದು ಪ್ರಕರಣ ಪತ್ತೆಯಾಗಿದೆ. 

ರಾಜಧಾನಿಯಲ್ಲಿ 346 ಜನರಿಗೆ ಕೊರೋನ ದೃಢ

ರಾಜಧಾನಿಯಲ್ಲಿ ಸೋಮವಾರ 346 ಜನರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, 8 ಮಂದಿ ಸೋಂಕಿಗೆ ಬಲಿಯಾಗಿದ್ದಾರೆ. 
ನಗರದಲ್ಲಿ ಇಲ್ಲಿಯವರೆಗೆ ಒಟ್ಟು 17,76,173 ಕೊರೋನ ಸೋಂಕಿತರು ದೃಢಪಟ್ಟಿದ್ದು, ಒಟ್ಟು 16,828 ಜನರು ಸೋಂಕಿಗೆ ಬಲಿಯಾಗಿದ್ದಾರೆ. ಒಟ್ಟು 17,53,711 ಜನರು ಗುಣಮುಖರಾಗಿ ಬಿಡುಗಡೆಯಾಗಿದ್ದಾರೆ.

ಕೋವಿಡ್ ನಿಗದಿತ ಆಸ್ಪತ್ರೆಗಳು ಹಾಗೂ ಆರೋಗ್ಯ ಕೇಂದ್ರಗಳು ಹಾಗೂ ಆರೈಕೆ ಕೇಂದ್ರಗಳಲ್ಲಿ ಸಕ್ರಿಯ ಸೋಂಕಿತರು ಚಿಕಿತ್ಸೆ ಪಡೆಯುತ್ತಿದ್ದಾರೆ. 

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News