×
Ad

ಸಹಾಯಧನ: ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ, ಎನ್‌ಪಿಸಿಐ ಮ್ಯಾಪಿಂಗ್ ಕಡ್ಡಾಯ

Update: 2022-02-23 23:06 IST

ಉಡುಪಿ, ಫೆ.23: ಕೃಷಿ ಇಲಾಖೆಯ ವತಿಯಿಂದ ನೀಡಲಾಗುವ ಪಿ.ಎಂ ಕಿಸಾನ್ ಕರ್ನಾಟಕ ಯೋಜನೆಯ ಆರ್ಥಿಕ ಸಹಾಯಧನವು ಜಿಲ್ಲೆಯ 2257 ಮಂದಿ ರೈತರಿಗೆ ಹಾಗೂ 1067 ಮಂದಿ ವಿದ್ಯಾರ್ಥಿಗಳಿಗೆ ಮುಖ್ಯಮಂತ್ರಿಗಳ ರೈತ ವಿದ್ಯಾನಿಧಿ ಸ್ಕಾಲರ್‌ಶಿಪ್ ಸಹಾಯಧನವು ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಎನ್‌ಪಿಸಿಐ ಮ್ಯಾಪಿಂಗ್ ಬಾಕಿ ಇರುವುದರಿಂದ ವರ್ಗಾವಣೆಯಾಗಿಲ್ಲ.

ಆದ್ದರಿಂದ ಈ ರೈತರು ಹಾಗೂ ವಿದ್ಯಾರ್ಥಿಗಳ ಪಟ್ಟಿಯನ್ನು ಕೃಷಿ ಇಲಾಖೆಯ ಹೋಬಳಿಯ ರೈತ ಸಂಪರ್ಕ ಕೇಂದ್ರ ಹಾಗೂ ತಾಲೂಕು ಸಹಾಯಕ ಕೃಷಿ ನಿರ್ದೇಶಕರ ಕಚೇರಿಯ ನಾಮಫಲಕದಲ್ಲಿ ಪ್ರಕಟಿಸಲಾಗಿದ್ದು, ಸಂಬಂಧಪಟ್ಟ ರೈತರು ಹಾಗೂ ವಿದ್ಯಾರ್ಥಿಗಳು ಕೃಷಿ ಇಲಾಖೆಯ ಕಛೇರಿಗಳಿಂದ ಆಧಾರ್ ಜೋಡಣೆಯ ಒಪ್ಪಿಗೆ ನಮೂನೆಯನ್ನು ಪಡೆದು ಭರ್ತಿ ಮಾಡಿ, ಸಂಬಂಧಪಟ್ಟ ಬ್ಯಾಂಕ್ ಶಾಖೆಯನ್ನು ಸಂಪರ್ಕಿಸಿ, ಬ್ಯಾಂಕ್ ಖಾತೆಗೆ ಆಧಾರ್ ಜೋಡಣೆ ಹಾಗೂ ಎನ್‌ಪಿಸಿಐ ಮ್ಯಾಪಿಂಗ್‌ನ್ನು ಮಾಡಿಸುವಂತೆ ಕೃಷಿ ಇಲಾಖೆಯ ಜಂಟಿ ಕೃಷಿ ನಿದೇಶರ್ಕರು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News