ಉಕ್ರೇನ್ ವಾಯುಪ್ರದೇಶ ಬಂದ್: ಭಾರತೀಯರನ್ನು ಕರೆತರಲು ಹೋಗಿದ್ದ ಏರ್ ಇಂಡಿಯಾ ವಿಮಾನ ದಿಲ್ಲಿಗೆ ವಾಪಸ್

Update: 2022-02-24 06:06 GMT

ಹೊಸದಿಲ್ಲಿ: ಭಾರತೀಯರನ್ನು ಸ್ವದೇಶಕ್ಕೆ ಕರೆತರಲು ಉಕ್ರೇನ್‌ಗೆ ಹಾರಾಟ ನಡೆಸಿದ್ದ ಏರ್ ಇಂಡಿಯಾ ವಿಮಾನವು ದಿಲ್ಲಿಗೆ ಹಿಂತಿರುಗುತ್ತಿದೆ ಎಂದು NDTV ವರದಿ ಮಾಡಿದೆ.

 ತನ್ನ ಪೂರ್ವ ಭಾಗಗಳಲ್ಲಿ ರಷ್ಯಾದ ಮಿಲಿಟರಿ ಕಾರ್ಯಾಚರಣೆಗಳ ನಡೆಸುತ್ತಿರುವ ಕಾರಣ ತನ್ನ ವಾಯುಪ್ರದೇಶವನ್ನು ಮುಚ್ಚಲಾಗಿದೆ ಎಂದು ಉಕ್ರೇನ್ ಹೇಳಿದ ನಂತರ ಏರ್ ಇಂಡಿಯಾ ದಿಲ್ಲಿಗೆ ಹಿಂತಿರುಗುತ್ತಿದೆ. ರಷ್ಯಾದೊಂದಿಗಿನ ಸಂಘರ್ಷದ ನಡುವೆ ಸಾವಿರಾರು ಭಾರತೀಯರು ಉಕ್ರೇನ್‌ನಿಂದ ಸ್ವದೇಶಕ್ಕೆ ಮರಳಲು ಕಾಯುತ್ತಿದ್ದಾರೆ.

ರಷ್ಯಾದ ಅಧ್ಯಕ್ಷ ವ್ಲಾಡಿಮಿರ್ ಪುಟಿನ್ ಇಂದು ಬೆಳಿಗ್ಗೆ ರಷ್ಯಾದ ವಿಶೇಷ ಪಡೆಗಳಿಗೆ ಉಕ್ರೇನ್‌ನಲ್ಲಿ ಎರಡು ಪ್ರತ್ಯೇಕತಾವಾದಿ ಪ್ರದೇಶಗಳಲ್ಲಿ ಕಾರ್ಯನಿರ್ವಹಿಸಲು ಅವಕಾಶ ಮಾಡಿಕೊಟ್ಟರು.  ರಷ್ಯಾ ಇದನ್ನು ಸ್ವತಂತ್ರ ರಾಷ್ಟ್ರಗಳೆಂದು ಸೋಮವಾರ  ಗುರುತಿಸಿದೆ.

ಉಕ್ರೇನ್‌ಗೆ ಹೋಗುವ ಎಲ್ಲಾ ವಿಮಾನಗಳಿಗೆ ಏರ್‌ಮೆನ್‌ಗಳಿಗೆ ಸೂಚನೆಯನ್ನು ಕಳುಹಿಸಿದ ನಂತರ ಏರ್ ಇಂಡಿಯಾ ವಿಮಾನವು ದಿಲ್ಲಿಗೆ ಹಿಂತಿರುಗಲು ನಿರ್ಧರಿಸಿತು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News