×
Ad

ಜೀಪು ಮರಕ್ಕೆ ಢಿಕ್ಕಿ: ಚಾಲಕ ಮೃತ್ಯು

Update: 2022-03-01 21:34 IST

ಕೊಲ್ಲೂರು, ಮಾ.1: ಜೀಪೊಂದು ಮರಕ್ಕೆ ಢಿಕ್ಕಿ ಹೊಡೆದ ಪರಿಣಾಮ ಚಾಲಕ ಮೃತಪಟ್ಟ ಘಟನೆ ಕೊಲ್ಲೂರು ಗ್ರಾಮದ ಶುಕ್ಲತೀರ್ಥ ದೇವಸ್ಥಾನದ ಬಳಿಯ ತಿರುವಿನಲ್ಲಿ ಫೆ.28ರಂದು ಮಧ್ಯಾಹ್ನ ವೇಳೆ ನಡೆದಿದೆ.

ಮೃತರನ್ನು ಜೀಪ್ ಚಾಲಕ ಸುಧೀರ್ ಭಂಡಾರಿ ಎಂದು ಗುರುತಿಸಲಾಗಿದೆ. ಕೊಲ್ಲೂರು ಕಡೆಯಿಂದ ಹಾಲ್ಕಲ್ ಕಡೆಗೆ ಹೋಗುತ್ತಿದ್ದ ಜೀಪ್, ಅತೀವೇಗ ಹಾಗೂ ಅಜಾಗರೂಕತೆಯಿಂದ ತಿರುವಿನಲ್ಲಿ ರಸ್ತೆಯ ಬದಿಯ ಚರಂಡಿಗೆ ಸಾಗಿ, ಮರಕ್ಕೆ ಡಿಕ್ಕಿ ಹೊಡೆಯಿತ್ತೆನ್ನಲಾಗಿದೆ. ಇದರಿಂದ ಗಂಭೀರವಾಗಿ ಗಾಯಗೊಂಡ ಚಾಲಕ ಸುಧೀರ್ ಭಂಡಾರಿ ಕುಂದಾಪುರ ಸರಕಾರಿ ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆ ಮೃತಪಟ್ಟರು. ಈ ಬಗ್ಗೆ ಕೊಲ್ಲೂರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News