ಕೀವ್​ ನಲ್ಲಿ ಭಾರತೀಯ ವಿದ್ಯಾರ್ಥಿಗೆ ಗುಂಡೇಟು: ಕೇಂದ್ರ ಸಚಿವ ವಿಕೆ ಸಿಂಗ್ ಮಾಹಿತಿ

Update: 2022-03-04 03:59 GMT
ಸಾಂದರ್ಭಿಕ ಚಿತ್ರ (PTI)

ಹೊಸದಿಲ್ಲಿ: ಯುದ್ಧಪೀಡಿತ ಉಕ್ರೇನ್ ನ ಕೀವ್‌ನಿಂದ ಬರುತ್ತಿದ್ದ ವಿದ್ಯಾರ್ಥಿಯೊಬ್ಬನಿಗೆ ಗುಂಡೇಟು ತಗುಲಿ ಗಾಯಗೊಂಡಿರುವ ಬಗ್ಗೆ ಕೇಂದ್ರ ಸಚಿವ ವಿಕೆ ಸಿಂಗ್ ಹೇಳಿದ್ದಾರೆ.

ಎಎನ್​ಐನೊಂದಿಗೆ ಮಾತನಾಡಿದ ಸಚಿವ ವಿಕೆ ಸಿಂಗ್, ಉಕ್ರೇನ್ ನ ರಾಜಧಾನಿ ಕೀವ್ ನಿಂದ ಬರುತ್ತಿದ್ದ ಭಾರತೀಯ ವಿದ್ಯಾರ್ಥಿಯೋರ್ವನಿಗೆ ಗುಂಡೇಟು ತಗುಲಿ ಗಾಯಗೊಂಡಿದ್ದು, ವಿದ್ಯಾರ್ಥಿ ಮಾರ್ಗ ಮಧ್ಯದಲ್ಲಿ ವಾಪಸ್ಸಾಗಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ ಎಂದು ಅವರು ಹೇಳಿದ್ದಾರೆ.

ಗಾಯಗೊಂಡಿರುವ ವಿದ್ಯಾರ್ಥಿ ಕೀವ್ ನ ಆಸ್ಪತ್ರೆಯೊಂದರಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News