×
Ad

ಉಕ್ರೇನ್‌ನಲ್ಲಿ ಭಾರತೀಯ ವಿದ್ಯಾರ್ಥಿಯ ಮೇಲೆ ಗುಂಡು ಹಾರಾಟ

Update: 2022-03-04 12:56 IST
Photo: NDTV

ಹೊಸದಿಲ್ಲಿ: ಉಕ್ರೇನ್ ರಾಜಧಾನಿ ಕೀವ್‌ನಿಂದ ತಪ್ಪಿಸಿಕೊಳ್ಳಲು ಪ್ರಯತ್ನಿಸುತ್ತಿರುವಾಗ ಭಾರತೀಯ  ವಿದ್ಯಾರ್ಥಿ ಹರ್ಜೋತ್ ಸಿಂಗ್  ಮೇಲೆ ಗುಂಡು ಹಾರಿಸಲಾಗಿದೆ ಎಂದು NDTV ವರದಿ ಮಾಡಿದೆ.

"ಗುಂಡು ನನ್ನ ಭುಜದಿಂದ ಪ್ರವೇಶಿಸಿತು. ಅವರು ನನ್ನ ಎದೆಯಿಂದ ಗುಂಡನ್ನು ಹೊರತೆಗೆದರು ... ನನ್ನ ಕಾಲು ಮುರಿತವಾಗಿದೆ" ಎಂದು ಹರ್ಜೋತ್ ಸಿಂಗ್ ಕೀವ್ ಸಿಟಿ ಆಸ್ಪತ್ರೆಯಿಂದ ಮಾತನಾಡುತ್ತಾ ಹೇಳಿದರು.

"ನಾನು ಅಧಿಕಾರಿಗಳಿಗೆ ಕರೆ ಮಾಡುತ್ತಲೇ ಇದ್ದೆ. ನನ್ನನ್ನು ಎಲ್ವಿವ್‌ಗೆ ಕರೆದೊಯ್ಯಲು ನನಗೆ ಕೆಲವು ಸೌಲಭ್ಯಗಳು ಬೇಕಾಗಿದ್ದವು. ಆದರೆ ಯಾರೂ ನನ್ನನ್ನು ಸಂಪರ್ಕಿಸಲಿಲ್ಲ. ಎನ್‌ಡಿಟಿವಿ ಮಾತ್ರ ನನ್ನನ್ನು ತಲುಪಿತು. ಈಗ ಏನಾಗುತ್ತಿದೆ ಎಂಬುದರ ವಾಸ್ತವತೆ ಇಡೀ ಜಗತ್ತಿಗೆ ತಿಳಿಯುತ್ತದೆ" ಎಂದು ಅವರು ಹೇಳಿದರು.

ಹರ್ಜೋತ್ ಸಿಂಗ್ ತನ್ನ ಸ್ನೇಹಿತರೊಂದಿಗೆ ಕ್ಯಾಬ್‌ನಲ್ಲಿ ಗಡಿಯನ್ನು ತಲುಪಲು ಪ್ರಯತ್ನಿಸುತ್ತಿದ್ದಾಗ ಅವರ ಮೇಲೆ ಗುಂಡು ಹಾರಿಸಲಾಗಿದೆ . ಅವರು ಕೀವ್ ನಗರದಿಂದ ತಪ್ಪಿಸಿಕೊಳ್ಳಲು ಹಾಗೂ ಹೇಗಾದರೂ ಎಲ್ವಿವ್ ತಲುಪಲು ಪ್ರಯತ್ನಿಸುತ್ತಿದ್ದರು ಎಂದು ವರದಿಯಾಗಿದೆ.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News