×
Ad

ನವೀನ್ ಮೃತದೇಹ ಪಡೆಯಲು ಎಲ್ಲ ಪ್ರಯತ್ನ: ಸಿಎಂ ಬೊಮ್ಮಾಯಿ

Update: 2022-03-05 10:55 IST

ಬೆಂಗಳೂರು, ಮಾ.5: ಉಕ್ರೇನ್ ನಲ್ಲಿ ರಶ್ಯದ ಶೆಲ್ ದಾಳಿಯಿಂದ ಮೃತಪಟ್ಟ ವೈದ್ಯ ವಿದ್ಯಾರ್ಥಿ ನವೀನ್ ಗ್ಯಾನಗೌಡರ್ ಮೃತದೇಹವನ್ನು ಪಡೆಯುವ ಪ್ರಯತ್ನ ಜಾರಿಯಲ್ಲಿದೆ. ನಿಖರ ಮಾಹಿತಿ ಪಡೆಯಲಾಗುತ್ತಿದೆ ಎಂದು ಮುಖ್ಯ ಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದ್ದಾರೆ.

ಅವರು ಇಂದು ತಮ್ಮ ನಿವಾಸದ ಬಳಿ ಮಾಧ್ಯಮದವರೊಂದಿಗೆ ಮಾತನಾಡುತ್ತಿದ್ದರು.

 ಉಕ್ರೇನ್ ನಿಂದ ಹಲವಾರು ಕನ್ನಡಿಗರನ್ನು ಕರೆತರಲಾಗಿದೆ. ಖಾರ್ಕಿವ್, ಕೀವ್ ನಲ್ಲಿ ಹೊರಬರಲಾರದ ಪರಿಸ್ಥಿತಿ ಯೂ ಇದೆ. ಸಿಲುಕಿಕೊಂಡವರನ್ನು ಪತ್ತೆಹಚ್ಚಲು ರಾಯಭಾರಿ ಕಚೇರಿಯವರೂ ಕಾರ್ಯನಿರತರಾಗಿದ್ದಾರೆ. ದಾಳಿ ಕಡಿಮೆಯಾದ ಕೂಡಲೇ ಸಂಪರ್ಕ ಸಾಧಿಸಲಾಗುವುದು ಎಂದು ಹೇಳಿದ್ದಾರೆ. ನಿನ್ನೆಯೂ ಕೇಂದ್ರ ವಿದೇಶಾಂಗ ಸಚಿವರೊಂದಿಗೆ ಮಾತನಾಡಿದ್ದು, ಉಕ್ರೇನ್ ರಾಯಭಾರ ಕಚೇರಿಯೊಂದಿಗೂ ಮಾತನಾಡಲಾಗಿದೆ ಎಂದರು.

ಕೇಂದ್ರ ಜಲಶಕ್ತಿ ಸಚಿವರು ಭಾಗವಹಿಸುವ  ಜಲಜೀವನ್ ಮಿಷನ್  ಕುರಿತು ದಕ್ಷಿಣ ರಾಜ್ಯಗಳ ಪ್ರಾದೇಶಿಕ ಸಭೆಯಲ್ಲಿ ಭಾಗವಹಿಸಿ  ನಂತರ ಶಿಕಾರಿಪುರ ದಲ್ಲಿ ರೈತರ ಸಭೆಯಲ್ಲಿ ಪಾಲ್ಗೊಂಡು, ರಾಣಿಬೆನ್ನೂರಿನಲ್ಲಿ ಉಕ್ರೇನ್ ನಲ್ಲಿ ಮೃತಪಟ್ಟ ನವೀನ್ ಅವರ ತಂದೆಯವರನ್ನು ಭೇಟಿಯಾಗಲಿದ್ದೇನೆ ಎಂದರು. ಸರಕಾರದಿಂದ ನವೀನ್ ಕುಟುಂಬಕ್ಕೆ ಪರಿಹಾರ ಕೊಡಲು ನಿರ್ಧರಿಸಲಾಗಿದೆ ಎಂದರು.

Writer - ವಾರ್ತಾಭಾರತಿ

contributor

Editor - ವಾರ್ತಾಭಾರತಿ

contributor

Similar News